<p><strong>ಚುನಾವಣೆ ಉಸ್ತುವಾರಿ ಇಡೀ ಆಯೋಗದ ಹೊಣೆ: ಸುಪ್ರೀಂ ಕೋರ್ಟ್ ಅಭಿಮತ</strong></p>.<p>ನವದೆಹಲಿ, ಫೆ. 2 (ಯುಎನ್ಐ, ಪಿಟಿಐ)– ಸಂಸತ್ತು ಹಾಗೂ ವಿಧಾನಸಭೆಗಳಿಗೆ ಮುಕ್ತ ಹಾಗೂ ನ್ಯಾಯಯುತ ಚುನಾವಣೆ ನಡೆಸುವ ದಿಸೆಯಲ್ಲಿನ ಮೇಲ್ವಿಚಾರಣೆ, ಪರಿಶೀಲನೆ, ಉಸ್ತುವಾರಿ ಹಾಗೂ ಮತದಾರರ ಪಟ್ಟಿ ಸಿದ್ಧಗೊಳಿಸುವ ಅಧಿಕಾರ ಇಡಿಯಾಗಿ ದೇಶದ<br />ಚುನಾವಣಾ ಆಯೋಗದಲ್ಲಿ ಅಡಕವಾಗಿದೆಯೇ ವಿನಾ ಮುಖ್ಯ ಚುನಾವಣಾ ಕಮಿಷನರ್ ಬಳಿ ಮಾತ್ರ ಅಲ್ಲ ಎಂಬ ಇಂಗಿತವನ್ನು ಸುಪ್ರೀಂ ಕೋರ್ಟ್ ಇಂದು ವ್ಯಕ್ತಪಡಿಸಿತು.</p>.<p>ಮುಖ್ಯ ಚುನಾವಣಾ ಕಮಿಷನರ್ಗೆ (ಸಿ.ಇ.ಸಿ) ಸರಿಸಮಾನವಾಗಿ ಇನ್ನಿಬ್ಬರು ಚುನಾವಣಾ ಕಮಿಷನರ್ಗಳನ್ನು (ಇ.ಸಿ) ನೇಮಕ ಮಾಡಿದ್ದರ ಯತಾರ್ಥತೆಯನ್ನು ಪ್ರಶ್ನಿಸಿ ಮುಖ್ಯ ಚುನಾವಣಾ ಕಮಿಷನರ್ ಟಿ.ಎನ್.ಶೇಷನ್ ಮತ್ತು ಇತರ ನಾಲ್ವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಪೀಠ ಇಂದು ಈ ಅಭಿಪ್ರಾಯ ವ್ಯಕ್ತಪಡಿಸಿತು.</p>.<p><strong>ಸಿದ್ಧಲಿಂಗಯ್ಯಗೆ ಕಣಗಾಲ್ ಪ್ರಶಸ್ತಿ, ಕೆ.ಎಸ್.ಅಶ್ವಥ್ಗೆ ಡಾ. ರಾಜ್ ಪ್ರಶಸ್ತಿ</strong></p>.<p><strong>ಬೆಂಗಳೂರು, ಫೆ. 2</strong>– ಹೆಸರಾಂತ ಚಿತ್ರನಟ ಕೆ.ಎಸ್.ಅಶ್ವಥ್ ಅವರಿಗೆ ಡಾ. ರಾಜ್ಕುಮಾರ್ ಪ್ರಶಸ್ತಿಯನ್ನು ಹಾಗೂ ದಿವಂಗತ ಪುಟ್ಟಣ್ಣ ಕಣಗಾಲ್ ಪ್ರಶಸ್ತಿಯನ್ನು ಖ್ಯಾತ ಚಿತ್ರನಿರ್ದೇಶಕ ಸಿದ್ಧಲಿಂಗಯ್ಯ ಅವರಿಗೆ ನೀಡಲಾಗಿದೆ.</p>.<p>1993– 94ನೇ ಸಾಲಿನ ಈ ಪ್ರಶಸ್ತಿಗಳೊಂದಿಗೆ ತಲಾ ಒಂದು ಲಕ್ಷ ರೂಪಾಯಿ ನಗದು ಬಹುಮಾನವನ್ನು ಇವರಿಬ್ಬರೂ ಪಡೆಯುವರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚುನಾವಣೆ ಉಸ್ತುವಾರಿ ಇಡೀ ಆಯೋಗದ ಹೊಣೆ: ಸುಪ್ರೀಂ ಕೋರ್ಟ್ ಅಭಿಮತ</strong></p>.<p>ನವದೆಹಲಿ, ಫೆ. 2 (ಯುಎನ್ಐ, ಪಿಟಿಐ)– ಸಂಸತ್ತು ಹಾಗೂ ವಿಧಾನಸಭೆಗಳಿಗೆ ಮುಕ್ತ ಹಾಗೂ ನ್ಯಾಯಯುತ ಚುನಾವಣೆ ನಡೆಸುವ ದಿಸೆಯಲ್ಲಿನ ಮೇಲ್ವಿಚಾರಣೆ, ಪರಿಶೀಲನೆ, ಉಸ್ತುವಾರಿ ಹಾಗೂ ಮತದಾರರ ಪಟ್ಟಿ ಸಿದ್ಧಗೊಳಿಸುವ ಅಧಿಕಾರ ಇಡಿಯಾಗಿ ದೇಶದ<br />ಚುನಾವಣಾ ಆಯೋಗದಲ್ಲಿ ಅಡಕವಾಗಿದೆಯೇ ವಿನಾ ಮುಖ್ಯ ಚುನಾವಣಾ ಕಮಿಷನರ್ ಬಳಿ ಮಾತ್ರ ಅಲ್ಲ ಎಂಬ ಇಂಗಿತವನ್ನು ಸುಪ್ರೀಂ ಕೋರ್ಟ್ ಇಂದು ವ್ಯಕ್ತಪಡಿಸಿತು.</p>.<p>ಮುಖ್ಯ ಚುನಾವಣಾ ಕಮಿಷನರ್ಗೆ (ಸಿ.ಇ.ಸಿ) ಸರಿಸಮಾನವಾಗಿ ಇನ್ನಿಬ್ಬರು ಚುನಾವಣಾ ಕಮಿಷನರ್ಗಳನ್ನು (ಇ.ಸಿ) ನೇಮಕ ಮಾಡಿದ್ದರ ಯತಾರ್ಥತೆಯನ್ನು ಪ್ರಶ್ನಿಸಿ ಮುಖ್ಯ ಚುನಾವಣಾ ಕಮಿಷನರ್ ಟಿ.ಎನ್.ಶೇಷನ್ ಮತ್ತು ಇತರ ನಾಲ್ವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಪೀಠ ಇಂದು ಈ ಅಭಿಪ್ರಾಯ ವ್ಯಕ್ತಪಡಿಸಿತು.</p>.<p><strong>ಸಿದ್ಧಲಿಂಗಯ್ಯಗೆ ಕಣಗಾಲ್ ಪ್ರಶಸ್ತಿ, ಕೆ.ಎಸ್.ಅಶ್ವಥ್ಗೆ ಡಾ. ರಾಜ್ ಪ್ರಶಸ್ತಿ</strong></p>.<p><strong>ಬೆಂಗಳೂರು, ಫೆ. 2</strong>– ಹೆಸರಾಂತ ಚಿತ್ರನಟ ಕೆ.ಎಸ್.ಅಶ್ವಥ್ ಅವರಿಗೆ ಡಾ. ರಾಜ್ಕುಮಾರ್ ಪ್ರಶಸ್ತಿಯನ್ನು ಹಾಗೂ ದಿವಂಗತ ಪುಟ್ಟಣ್ಣ ಕಣಗಾಲ್ ಪ್ರಶಸ್ತಿಯನ್ನು ಖ್ಯಾತ ಚಿತ್ರನಿರ್ದೇಶಕ ಸಿದ್ಧಲಿಂಗಯ್ಯ ಅವರಿಗೆ ನೀಡಲಾಗಿದೆ.</p>.<p>1993– 94ನೇ ಸಾಲಿನ ಈ ಪ್ರಶಸ್ತಿಗಳೊಂದಿಗೆ ತಲಾ ಒಂದು ಲಕ್ಷ ರೂಪಾಯಿ ನಗದು ಬಹುಮಾನವನ್ನು ಇವರಿಬ್ಬರೂ ಪಡೆಯುವರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>