<h2>ರೈತರ ಸಮಸ್ಯೆ ಚರ್ಚೆಗೆ ಕೃಷಿ ತಜ್ಞರ ಸಭೆ</h2>.<p><strong>ಧಾರವಾಡ, ಫೆ. 22–</strong> ಬೆಲೆ ಕುಸಿತದಿಂದ ತೀವ್ರ ಸಂಕಷ್ಟಕ್ಕೆ ಸಿಕ್ಕಿರುವ ರೈತರ ಸಮಸ್ಯೆಗಳನ್ನು ಕುರಿತು ಚರ್ಚಿಸಲು ಎಲ್ಲ ರಾಜ್ಯಗಳ ಕೃಷಿ ಕಮಿಷನರ್ ಹಾಗೂ ಕೃಷಿ ತಜ್ಞರ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಇಂದು ಇಲ್ಲಿ ತಿಳಿಸಿದರು.</p>.<p>ಕೇಂದ್ರ ಕೃಷಿ ಕಾರ್ಯಾಚರಣೆ ಪಡೆ ಅಧ್ಯಕ್ಷ ಶರದ್ ಜೋಶಿಯವರ ಜತೆ ರೈತರ ಸಮಸ್ಯೆ ಕುರಿತು ಸಮಾಲೋಚಿಸಿದ್ದೇನೆ. ಅವರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಎಲ್ಲರೂ ತಮ್ಮ ಅನುಭವ ಹಾಗೂ ಸಮಸ್ಯೆಗಳನ್ನು ಹಂಚಿಕೊಂಡು ಸರಿಯಾದ ಅಭಿಪ್ರಾಯಕ್ಕೆ ಬರುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<h2>ಆ್ಯಸಿಡ್ ಎರಚಿದ ಪ್ರಕರಣ ನ್ಯಾಯಾಂಗ ತನಿಖೆಗೆ: ಖರ್ಗೆ</h2>.<p><strong>ಬೆಂಗಳೂರು, ಫೆ. 22–</strong> ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚನ್ನಮ್ಮ ಮತ್ತು ಅವರ ಸೊಸೆ ಭವಾನಿ ಅವರ ಮೇಲೆ ಆ್ಯಸಿಡ್ ಎರಚಿದ ಪ್ರಕರಣದ ಸಮಗ್ರ ವಿಚಾರಣೆಗಾಗಿ ಹೈಕೋರ್ಟ್ನ ಹಾಲಿ ನ್ಯಾಯಮೂರ್ತಿಯೊಬ್ಬರಿಂದ ನ್ಯಾಯಾಂಗ ವಿಚಾರಣೆ ನಡೆಸಲಾಗುವುದು ಎಂದು ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ ಪ್ರಕಟಿಸಿದರು.</p>.<p>ಜತೆಗೆ ಈ ಪ್ರಕರಣದ ತನಿಖೆಯನ್ನು ಸ್ಥಳೀಯ ಪೊಲೀಸರಿಗೆ ವಹಿಸದೆ ಸಿಒಡಿ ಪೊಲೀಸರಿಗೆ ವಹಿಸಿಕೊಡಲಾಗಿದೆ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<h2>ರೈತರ ಸಮಸ್ಯೆ ಚರ್ಚೆಗೆ ಕೃಷಿ ತಜ್ಞರ ಸಭೆ</h2>.<p><strong>ಧಾರವಾಡ, ಫೆ. 22–</strong> ಬೆಲೆ ಕುಸಿತದಿಂದ ತೀವ್ರ ಸಂಕಷ್ಟಕ್ಕೆ ಸಿಕ್ಕಿರುವ ರೈತರ ಸಮಸ್ಯೆಗಳನ್ನು ಕುರಿತು ಚರ್ಚಿಸಲು ಎಲ್ಲ ರಾಜ್ಯಗಳ ಕೃಷಿ ಕಮಿಷನರ್ ಹಾಗೂ ಕೃಷಿ ತಜ್ಞರ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಇಂದು ಇಲ್ಲಿ ತಿಳಿಸಿದರು.</p>.<p>ಕೇಂದ್ರ ಕೃಷಿ ಕಾರ್ಯಾಚರಣೆ ಪಡೆ ಅಧ್ಯಕ್ಷ ಶರದ್ ಜೋಶಿಯವರ ಜತೆ ರೈತರ ಸಮಸ್ಯೆ ಕುರಿತು ಸಮಾಲೋಚಿಸಿದ್ದೇನೆ. ಅವರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಎಲ್ಲರೂ ತಮ್ಮ ಅನುಭವ ಹಾಗೂ ಸಮಸ್ಯೆಗಳನ್ನು ಹಂಚಿಕೊಂಡು ಸರಿಯಾದ ಅಭಿಪ್ರಾಯಕ್ಕೆ ಬರುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<h2>ಆ್ಯಸಿಡ್ ಎರಚಿದ ಪ್ರಕರಣ ನ್ಯಾಯಾಂಗ ತನಿಖೆಗೆ: ಖರ್ಗೆ</h2>.<p><strong>ಬೆಂಗಳೂರು, ಫೆ. 22–</strong> ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚನ್ನಮ್ಮ ಮತ್ತು ಅವರ ಸೊಸೆ ಭವಾನಿ ಅವರ ಮೇಲೆ ಆ್ಯಸಿಡ್ ಎರಚಿದ ಪ್ರಕರಣದ ಸಮಗ್ರ ವಿಚಾರಣೆಗಾಗಿ ಹೈಕೋರ್ಟ್ನ ಹಾಲಿ ನ್ಯಾಯಮೂರ್ತಿಯೊಬ್ಬರಿಂದ ನ್ಯಾಯಾಂಗ ವಿಚಾರಣೆ ನಡೆಸಲಾಗುವುದು ಎಂದು ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ ಪ್ರಕಟಿಸಿದರು.</p>.<p>ಜತೆಗೆ ಈ ಪ್ರಕರಣದ ತನಿಖೆಯನ್ನು ಸ್ಥಳೀಯ ಪೊಲೀಸರಿಗೆ ವಹಿಸದೆ ಸಿಒಡಿ ಪೊಲೀಸರಿಗೆ ವಹಿಸಿಕೊಡಲಾಗಿದೆ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>