<p><strong>ಬೆಂಗಳೂರು:</strong> ಏ. 28–ಮುಂದಿನ ಹಣಕಾಸು ವರ್ಷದ ಪ್ರಾರಂಭ ದಿಂದಲೇ ರಾಜ್ಯದಲ್ಲಿ ಮೌಲ್ಯವರ್ಧಿತ ತೆರಿಗೆ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು ಎಂದು ಹಣಕಾಸು ಖಾತೆ ರಾಜ್ಯ ಸಚಿವ ಎಂ. ಶಿವಣ್ಣ ಇಂದು ಇಲ್ಲಿ ತಿಳಿಸಿದರು.</p>.<p>ತಮ್ಮನ್ನು ಭೇಟಿ ಮಾಡಿದ ವರದಿಗಾರರ ಜತೆಗೆ ಮಾತನಾಡಿದ ಅವರು, ಈ ಕುರಿತು ಎಲ್ಲಾ ಸಿದ್ಧತೆ ಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದರು.</p>.<p>ಮೌಲ್ಯವರ್ಧಿತ ತೆರಿಗೆ ವ್ಯವಸ್ಥೆಯನ್ನು ಜಾರಿಗೆ ತರಲು ಪಶ್ಚಿಮ ಬಂಗಾಳದ ಹಣಕಾಸು ಸಚಿವ ಅಸೀಂದಾಸ್ ಗುಪ್ತ ಅವರ ಅಧ್ಯಕ್ಷತೆ<br>ಯಲ್ಲಿ ಈಚೆಗೆ ದೆಹಲಿಯಲ್ಲಿ ಒಂದು ಸಭೆ ನಡೆಯಿತು. ಆ ಸಭೆಯಲ್ಲಿ ತಾವೂ ಭಾಗವಹಿಸಿದ್ದಾಗಿ ತಿಳಿಸಿದ ಸಚಿವರು, ಅಲ್ಲಿ ಸುದೀರ್ಘ ಚರ್ಚೆ ನಡೆಯಿತು ಎಂದರು.</p>.<p><strong>ವಿಷಪೂರಿತ ಆಹಾರ ಸೇವಿಸಿ ಐವರ ಸಾವು</strong></p>.<p><strong>ಬೆಂಗಳೂರು:</strong> ಏ. 28– ಕಾಡುಸೀಗೆ ಸೊಪ್ಪಿನ ಸಾರು ಮತ್ತು ರಾಗಿಮುದ್ದೆ ಉಂಡ ಒಂದೇ ಮನೆಯ ಮೂವರು ಮಕ್ಕಳು, ವೃದ್ಧೆ ಸೇರಿದಂತೆ ಐವರು ಶುಕ್ರವಾರ ಮಧ್ಯಾಹ್ನ ಕನಕಪುರ ತಾಲ್ಲೂಕಿನ ರಾಮದೇವರ ದೊಡ್ಡಿ ಯಲ್ಲಿ ಮೃತಪಟ್ಟಿದ್ದಾರೆ.</p>.<p>ಕೂಲಿ ಕೆಲಸ ಮಾಡುವ ಗೋಪಾಲ ಎಂಬುವರ ಮನೆಯಲ್ಲಿ ಈ ಘಟನೆ ಸಂಭವಿಸಿದೆ. ಈ ಸಂದರ್ಭದಲ್ಲಿ ಗೋಪಾಲ ಅವರು ಮೇಕೆ ಖರೀದಿ ಮಾಡಲು ಮರಳವಾಡಿ ಸಂತೆಗೆ ಹೋಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಏ. 28–ಮುಂದಿನ ಹಣಕಾಸು ವರ್ಷದ ಪ್ರಾರಂಭ ದಿಂದಲೇ ರಾಜ್ಯದಲ್ಲಿ ಮೌಲ್ಯವರ್ಧಿತ ತೆರಿಗೆ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು ಎಂದು ಹಣಕಾಸು ಖಾತೆ ರಾಜ್ಯ ಸಚಿವ ಎಂ. ಶಿವಣ್ಣ ಇಂದು ಇಲ್ಲಿ ತಿಳಿಸಿದರು.</p>.<p>ತಮ್ಮನ್ನು ಭೇಟಿ ಮಾಡಿದ ವರದಿಗಾರರ ಜತೆಗೆ ಮಾತನಾಡಿದ ಅವರು, ಈ ಕುರಿತು ಎಲ್ಲಾ ಸಿದ್ಧತೆ ಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದರು.</p>.<p>ಮೌಲ್ಯವರ್ಧಿತ ತೆರಿಗೆ ವ್ಯವಸ್ಥೆಯನ್ನು ಜಾರಿಗೆ ತರಲು ಪಶ್ಚಿಮ ಬಂಗಾಳದ ಹಣಕಾಸು ಸಚಿವ ಅಸೀಂದಾಸ್ ಗುಪ್ತ ಅವರ ಅಧ್ಯಕ್ಷತೆ<br>ಯಲ್ಲಿ ಈಚೆಗೆ ದೆಹಲಿಯಲ್ಲಿ ಒಂದು ಸಭೆ ನಡೆಯಿತು. ಆ ಸಭೆಯಲ್ಲಿ ತಾವೂ ಭಾಗವಹಿಸಿದ್ದಾಗಿ ತಿಳಿಸಿದ ಸಚಿವರು, ಅಲ್ಲಿ ಸುದೀರ್ಘ ಚರ್ಚೆ ನಡೆಯಿತು ಎಂದರು.</p>.<p><strong>ವಿಷಪೂರಿತ ಆಹಾರ ಸೇವಿಸಿ ಐವರ ಸಾವು</strong></p>.<p><strong>ಬೆಂಗಳೂರು:</strong> ಏ. 28– ಕಾಡುಸೀಗೆ ಸೊಪ್ಪಿನ ಸಾರು ಮತ್ತು ರಾಗಿಮುದ್ದೆ ಉಂಡ ಒಂದೇ ಮನೆಯ ಮೂವರು ಮಕ್ಕಳು, ವೃದ್ಧೆ ಸೇರಿದಂತೆ ಐವರು ಶುಕ್ರವಾರ ಮಧ್ಯಾಹ್ನ ಕನಕಪುರ ತಾಲ್ಲೂಕಿನ ರಾಮದೇವರ ದೊಡ್ಡಿ ಯಲ್ಲಿ ಮೃತಪಟ್ಟಿದ್ದಾರೆ.</p>.<p>ಕೂಲಿ ಕೆಲಸ ಮಾಡುವ ಗೋಪಾಲ ಎಂಬುವರ ಮನೆಯಲ್ಲಿ ಈ ಘಟನೆ ಸಂಭವಿಸಿದೆ. ಈ ಸಂದರ್ಭದಲ್ಲಿ ಗೋಪಾಲ ಅವರು ಮೇಕೆ ಖರೀದಿ ಮಾಡಲು ಮರಳವಾಡಿ ಸಂತೆಗೆ ಹೋಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>