<p><strong>ನೀರು ಬಳಕೆದಾರರ ಸಹಕಾರ ಸಂಘ ಮಸೂದೆಗೆ ಒಪ್ಪಿಗೆ</strong></p>.<p><strong>ಬೆಂಗಳೂರು, ನ. 14–</strong> ರಾಜ್ಯದಾದ್ಯಂತ ನೀರು ಬಳಕೆದಾರರ ಸಹಕಾರ ಸಂಘಗಳನ್ನು ಅಸ್ತಿತ್ವಕ್ಕೆ ತರಲು ಅವಕಾಶ ಕಲ್ಪಿಸುವ ಕರ್ನಾಟಕ ನೀರಾವರಿ ಮತ್ತು ಇತರ ಕೆಲವು ಕಾನೂನು (ತಿದ್ದುಪಡಿ) ಮಸೂದೆಯನ್ನು ವಿಧಾನಸಭೆ ಅಂಗೀಕರಿಸಿತು.</p>.<p>ಈಗಾಗಲೇ, ಈ ಮಸೂದೆಯು ಸುಗ್ರೀವಾಜ್ಞೆ ರೂಪದಲ್ಲಿ ಜಾರಿಯಲ್ಲಿದೆ.</p>.<p>ಪ್ರತಿಯೊಬ್ಬ ಅಚ್ಚುಕಟ್ಟುದಾರನೂ (ನೀರಿನ ಬಳಕೆದಾರ) ಈ ಸಹಕಾರ ಸಂಘಗಳ ಸದಸ್ಯನಾಗುವ ಹಕ್ಕನ್ನು ಹೊಂದಿರುತ್ತಾನೆ. ಪರಿಶಿಷ್ಟ ಜಾತಿ ಮತ್ತು ವರ್ಗದ ಸದಸ್ಯರ ಷೇರು ಹಣವನ್ನು ಸರ್ಕಾರವೇ ತುಂಬುತ್ತದೆ ಎಂದು ಭಾರಿ ನೀರಾವರಿ ಸಚಿವ ಎಚ್.ಕೆ. ಪಾಟೀಲ ಅವರು ಮಾಹಿತಿ ನೀಡಿದರು.</p><p>_____________________</p>.<p><strong>ಪಾಲಿಕೆ: ಕುರ್ಚಿಗಾಗಿ ಕಿತ್ತಾಟ</strong></p>.<p><strong>ಹುಬ್ಬಳ್ಳಿ, ನ. 14–</strong> ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆಯ ಸೇವೆಯಿಂದ ಈಗಾಗಲೇ ಬಿಡುಗಡೆ ಹೊಂದಿರುವ ಹಿಂದಿನ ಆರೋಗ್ಯಾಧಿಕಾರಿ ಡಾ. ಹೀರಾ ರಾಯ್ಕರ್ ಅವರು, ಮತ್ತೆ ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಳ್ಳುವ ಪ್ರಕರಣ ಎರಡನೆ ದಿನವಾದ ಇಂದೂ ಮುಂದುವರಿಯಿತು.</p>.<p>ಆರೋಗ್ಯಾಧಿಕಾರಿ ಹುದ್ದೆಯನ್ನು ವಹಿಸಿಕೊಳ್ಳಲು ಅನುಮತಿ ನೀಡುವವರೆಗೆ ತಾವು ವಿರಮಿಸುವುದಿಲ್ಲ ಎಂದು ಸ್ಪಷ್ಟವಾಗಿ ಪಾಲಿಕೆಯ ಆಯುಕ್ತರಿಗೆ ತಿಳಿಸಿರುವ ರಾಯ್ಕರ್ ಅವರು, ಈ ಹುದ್ದೆಯಲ್ಲಿ ಮುಂದುವರಿಯಲು ರಾಜ್ಯದ ಆಡಳಿತ ನ್ಯಾಯಮಂಡಳಿ ಆದೇಶದ ಬೆಂಬಲ ತಮಗಿದೆ ಎಂದು ಹೇಳಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನೀರು ಬಳಕೆದಾರರ ಸಹಕಾರ ಸಂಘ ಮಸೂದೆಗೆ ಒಪ್ಪಿಗೆ</strong></p>.<p><strong>ಬೆಂಗಳೂರು, ನ. 14–</strong> ರಾಜ್ಯದಾದ್ಯಂತ ನೀರು ಬಳಕೆದಾರರ ಸಹಕಾರ ಸಂಘಗಳನ್ನು ಅಸ್ತಿತ್ವಕ್ಕೆ ತರಲು ಅವಕಾಶ ಕಲ್ಪಿಸುವ ಕರ್ನಾಟಕ ನೀರಾವರಿ ಮತ್ತು ಇತರ ಕೆಲವು ಕಾನೂನು (ತಿದ್ದುಪಡಿ) ಮಸೂದೆಯನ್ನು ವಿಧಾನಸಭೆ ಅಂಗೀಕರಿಸಿತು.</p>.<p>ಈಗಾಗಲೇ, ಈ ಮಸೂದೆಯು ಸುಗ್ರೀವಾಜ್ಞೆ ರೂಪದಲ್ಲಿ ಜಾರಿಯಲ್ಲಿದೆ.</p>.<p>ಪ್ರತಿಯೊಬ್ಬ ಅಚ್ಚುಕಟ್ಟುದಾರನೂ (ನೀರಿನ ಬಳಕೆದಾರ) ಈ ಸಹಕಾರ ಸಂಘಗಳ ಸದಸ್ಯನಾಗುವ ಹಕ್ಕನ್ನು ಹೊಂದಿರುತ್ತಾನೆ. ಪರಿಶಿಷ್ಟ ಜಾತಿ ಮತ್ತು ವರ್ಗದ ಸದಸ್ಯರ ಷೇರು ಹಣವನ್ನು ಸರ್ಕಾರವೇ ತುಂಬುತ್ತದೆ ಎಂದು ಭಾರಿ ನೀರಾವರಿ ಸಚಿವ ಎಚ್.ಕೆ. ಪಾಟೀಲ ಅವರು ಮಾಹಿತಿ ನೀಡಿದರು.</p><p>_____________________</p>.<p><strong>ಪಾಲಿಕೆ: ಕುರ್ಚಿಗಾಗಿ ಕಿತ್ತಾಟ</strong></p>.<p><strong>ಹುಬ್ಬಳ್ಳಿ, ನ. 14–</strong> ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆಯ ಸೇವೆಯಿಂದ ಈಗಾಗಲೇ ಬಿಡುಗಡೆ ಹೊಂದಿರುವ ಹಿಂದಿನ ಆರೋಗ್ಯಾಧಿಕಾರಿ ಡಾ. ಹೀರಾ ರಾಯ್ಕರ್ ಅವರು, ಮತ್ತೆ ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಳ್ಳುವ ಪ್ರಕರಣ ಎರಡನೆ ದಿನವಾದ ಇಂದೂ ಮುಂದುವರಿಯಿತು.</p>.<p>ಆರೋಗ್ಯಾಧಿಕಾರಿ ಹುದ್ದೆಯನ್ನು ವಹಿಸಿಕೊಳ್ಳಲು ಅನುಮತಿ ನೀಡುವವರೆಗೆ ತಾವು ವಿರಮಿಸುವುದಿಲ್ಲ ಎಂದು ಸ್ಪಷ್ಟವಾಗಿ ಪಾಲಿಕೆಯ ಆಯುಕ್ತರಿಗೆ ತಿಳಿಸಿರುವ ರಾಯ್ಕರ್ ಅವರು, ಈ ಹುದ್ದೆಯಲ್ಲಿ ಮುಂದುವರಿಯಲು ರಾಜ್ಯದ ಆಡಳಿತ ನ್ಯಾಯಮಂಡಳಿ ಆದೇಶದ ಬೆಂಬಲ ತಮಗಿದೆ ಎಂದು ಹೇಳಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>