ಬೆಂಗಳೂರು, ಮೇ 21– ಕಾಂಗ್ರೆಸ್ ಪಕ್ಷದ ನಾಯಕರ ಆಯ್ಕೆ ಬಗ್ಗೆ ‘ಒಪ್ಪಂದಕ್ಕೆ ಬರಲು ಪ್ರಯತ್ನಿಸಿ’ ಎಂದು ತಮ್ಮನ್ನು ಭೇಟಿ ಮಾಡುವ ಕಾಂಗ್ರೆಸ್ ಶಾಸಕರಿಗೆ ಸಲಹೆ ಮಾಡುತ್ತಿರುವ ಕಾಂಗ್ರೆಸ್ ಅಧ್ಯಕ್ಷ ಶ್ರೀ ಎಸ್. ನಿಜಲಿಂಗಪ್ಪ ಅವರು ‘ಒಪ್ಪಂದ ಸಾಧ್ಯವಾಗದಿದ್ದರೆ, ಚುನಾವಣೆ ನಡೆಯಲಿ’ ಎಂದು ರಾತ್ರಿ ವರದಿಗಾರರಿಗೆ ತಿಳಿಸಿದರು.