<p><strong>ಹಳ್ಳಿ ಜನರ ಮೇಲೆ ಪೊಲೀಸರ ಹಲ್ಲೆ</strong></p>.<p><strong>ಬೆಂಗಳೂರು, ಡಿ. 11– </strong>ಮಧುಗಿರಿ ತಾಲ್ಲೂಕಿನ ಹನುಮಂತಪುರ ಮತ್ತು ಅದರ ಸುತ್ತಮುತ್ತಲಿನ ಗ್ರಾಮಗಳ ಮೇಲೆ ಈ ತಿಂಗಳು ಆದಿಭಾಗದಲ್ಲಿ ಪೊಲೀಸಿನವರು ವಿನಾಕಾರಣ ದಾಳಿ ಮಾಡಿ ಮುಗ್ಧ ರೈತರು ಮತ್ತು ಅವರ ಹೆಂಗಸರು ಮಕ್ಕಳ ಮೇಲೆ ಅತ್ಯಾಚಾರ ನಡೆಸಿದರಲ್ಲದೆ ಕೈಗೆ ಸಿಕ್ಕಿದವ ರಿಗೆ ಚಿತ್ರಹಿಂಸೆ ಕೊಟ್ಟರೆಂದು ಕೊರಟಗೆರೆ ತಾಲ್ಲೂಕಿನ ರೈತ ಸಂಘದ ಅಧ್ಯಕ್ಷ ಶ್ರೀ ಚನ್ನಪ್ಪನವರು ಆಪಾದಿಸಿದರು.</p>.<p><strong>ಭೂಕಂಪ: ಕೊಯ್ನಾ ನಗರದಲ್ಲಿ 105ಕ್ಕೂ ಅಧಿಕ ಸಾವು</strong></p>.<p><strong>ಮುಂಬೈ, ಡಿ. 11– </strong>ಭಾರತದ ಇಡೀ ಪಶ್ಚಿಮಾರ್ಧವನ್ನೇ ಇಂದು ಮುಂಜಾನೆ ಅಲುಗಾಡಿಸಿದ ವಿಪತ್ಕಾರಕ ಭೂಕಂಪಕ್ಕೆ ಸತಾರಾ ಜಿಲ್ಲೆಯಲ್ಲಿರುವ ಮಹಾರಾಷ್ಟ್ರ ಜಲವಿದ್ಯುತ್ ಕೇಂದ್ರ ಸ್ಥಳವಾದ ಕೊಯ್ನಾ ನಗರ ತುತ್ತಾಗಿ ಸೋಮವಾರ ರಾತ್ರಿ ವೇಳೆಗೆ ಹಾಳು ಬಿದ್ದಿತ್ತು.</p>.<p>ರಾತ್ರಿ ಇಲ್ಲಿಗೆ ತಲುಪಿರುವ ವರದಿಗಳ ಪ್ರಕಾರ 105 ಜನ ಸತ್ತಿದ್ದಾರಲ್ಲದೆ, 1300 ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ 300 ಮಂದಿಗೆ ತೀವ್ರ ಗಾಯಗಳಾಗಿವೆ. ಸತ್ತವರಲ್ಲಿ ಅನೇಕರು ಸ್ತ್ರೀಯರು ಮತ್ತು ಮಕ್ಕಳೆಂದು ಗೊತ್ತಾಗಿದೆ. ಇವರಲ್ಲಿ ಅನೇಕರು ನಿದ್ರಿಸುತ್ತಿದ್ದಾಗ ಅವರ ಮನೆಗಳು ಕುಸಿದಿವೆ</p>.<p><strong>ವರದಿ ನ್ಯಾಯ ಎಂದಿದ್ದರಂತೆ ಚವಾಣ್</strong></p>.<p><strong>ಬೆಂಗಳೂರು, ಡಿ. 10– </strong>ಮಹಾಜನ್ ಆಯೋಗದ ವರದಿ ನ್ಯಾಯವಾದ ವರದಿಯೆಂದು ಕೇಂದ್ರದ ಗೃಹ ಸಚಿವ ಶ್ರೀ ವೈ.ಬಿ. ಚವಾಣ್ರವರು ಒಪ್ಪಿಕೊಂಡಿದ್ದಾರೆಯೇ? ಒಂದು ‘ರಹಸ್ಯವನ್ನು ಬಯಲು ಮಾಡಿದ’ ಕಾಂಗ್ರೆಸ್ ಸದಸ್ಯ ಶ್ರೀ ಕೆ.ಕೆ. ಶೆಟ್ಟರಿಗೆ ತಿಳಿದುಬಂದಿರುವ ಸಮಾಚಾರದಂತೆ ಶ್ರೀ ಚವಾಣರು ‘ನ್ಯಾಯವಾಗಿದೆ’ ಅಂದಿದ್ದರಂತೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಳ್ಳಿ ಜನರ ಮೇಲೆ ಪೊಲೀಸರ ಹಲ್ಲೆ</strong></p>.<p><strong>ಬೆಂಗಳೂರು, ಡಿ. 11– </strong>ಮಧುಗಿರಿ ತಾಲ್ಲೂಕಿನ ಹನುಮಂತಪುರ ಮತ್ತು ಅದರ ಸುತ್ತಮುತ್ತಲಿನ ಗ್ರಾಮಗಳ ಮೇಲೆ ಈ ತಿಂಗಳು ಆದಿಭಾಗದಲ್ಲಿ ಪೊಲೀಸಿನವರು ವಿನಾಕಾರಣ ದಾಳಿ ಮಾಡಿ ಮುಗ್ಧ ರೈತರು ಮತ್ತು ಅವರ ಹೆಂಗಸರು ಮಕ್ಕಳ ಮೇಲೆ ಅತ್ಯಾಚಾರ ನಡೆಸಿದರಲ್ಲದೆ ಕೈಗೆ ಸಿಕ್ಕಿದವ ರಿಗೆ ಚಿತ್ರಹಿಂಸೆ ಕೊಟ್ಟರೆಂದು ಕೊರಟಗೆರೆ ತಾಲ್ಲೂಕಿನ ರೈತ ಸಂಘದ ಅಧ್ಯಕ್ಷ ಶ್ರೀ ಚನ್ನಪ್ಪನವರು ಆಪಾದಿಸಿದರು.</p>.<p><strong>ಭೂಕಂಪ: ಕೊಯ್ನಾ ನಗರದಲ್ಲಿ 105ಕ್ಕೂ ಅಧಿಕ ಸಾವು</strong></p>.<p><strong>ಮುಂಬೈ, ಡಿ. 11– </strong>ಭಾರತದ ಇಡೀ ಪಶ್ಚಿಮಾರ್ಧವನ್ನೇ ಇಂದು ಮುಂಜಾನೆ ಅಲುಗಾಡಿಸಿದ ವಿಪತ್ಕಾರಕ ಭೂಕಂಪಕ್ಕೆ ಸತಾರಾ ಜಿಲ್ಲೆಯಲ್ಲಿರುವ ಮಹಾರಾಷ್ಟ್ರ ಜಲವಿದ್ಯುತ್ ಕೇಂದ್ರ ಸ್ಥಳವಾದ ಕೊಯ್ನಾ ನಗರ ತುತ್ತಾಗಿ ಸೋಮವಾರ ರಾತ್ರಿ ವೇಳೆಗೆ ಹಾಳು ಬಿದ್ದಿತ್ತು.</p>.<p>ರಾತ್ರಿ ಇಲ್ಲಿಗೆ ತಲುಪಿರುವ ವರದಿಗಳ ಪ್ರಕಾರ 105 ಜನ ಸತ್ತಿದ್ದಾರಲ್ಲದೆ, 1300 ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ 300 ಮಂದಿಗೆ ತೀವ್ರ ಗಾಯಗಳಾಗಿವೆ. ಸತ್ತವರಲ್ಲಿ ಅನೇಕರು ಸ್ತ್ರೀಯರು ಮತ್ತು ಮಕ್ಕಳೆಂದು ಗೊತ್ತಾಗಿದೆ. ಇವರಲ್ಲಿ ಅನೇಕರು ನಿದ್ರಿಸುತ್ತಿದ್ದಾಗ ಅವರ ಮನೆಗಳು ಕುಸಿದಿವೆ</p>.<p><strong>ವರದಿ ನ್ಯಾಯ ಎಂದಿದ್ದರಂತೆ ಚವಾಣ್</strong></p>.<p><strong>ಬೆಂಗಳೂರು, ಡಿ. 10– </strong>ಮಹಾಜನ್ ಆಯೋಗದ ವರದಿ ನ್ಯಾಯವಾದ ವರದಿಯೆಂದು ಕೇಂದ್ರದ ಗೃಹ ಸಚಿವ ಶ್ರೀ ವೈ.ಬಿ. ಚವಾಣ್ರವರು ಒಪ್ಪಿಕೊಂಡಿದ್ದಾರೆಯೇ? ಒಂದು ‘ರಹಸ್ಯವನ್ನು ಬಯಲು ಮಾಡಿದ’ ಕಾಂಗ್ರೆಸ್ ಸದಸ್ಯ ಶ್ರೀ ಕೆ.ಕೆ. ಶೆಟ್ಟರಿಗೆ ತಿಳಿದುಬಂದಿರುವ ಸಮಾಚಾರದಂತೆ ಶ್ರೀ ಚವಾಣರು ‘ನ್ಯಾಯವಾಗಿದೆ’ ಅಂದಿದ್ದರಂತೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>