<p><strong>ಮಧುಗಿರಿ ಪ್ರಕರಣದ ನ್ಯಾಯಾಂಗ ತನಿಖೆ</strong></p>.<p><strong>ಬೆಂಗಳೂರು, ಡಿ. 14– </strong>ಮಧುಗಿರಿ ತಾಲ್ಲೂಕಿನ ಕೆಲವು ಗ್ರಾಮಗಳಲ್ಲಿ ನಡೆದಿರುವ ಪೊಲೀಸ್ ಅತ್ಯಾಚಾರದ ಬಗ್ಗೆ ನ್ಯಾಯಾಂಗಾಧಿಕಾರಿಯಿಂದ ವಿಚಾರಣೆ ಏರ್ಪಡಿಸಲು ರಾಜ್ಯ ಸರಕಾರ ತೀರ್ಮಾನಿಸಿದೆ.</p>.<p>‘ನ್ಯಾಯಾಂಗಾಧಿಕಾರಿಯಿಂದ ವಿಚಾರಣೆ ನಡೆಸಲು, ಯಾವ ನ್ಯಾಯ ಮೂರ್ತಿಯ ಸೇವೆಯನ್ನು ಒದಗಿಸಲು ಸಾಧ್ಯ ಎಂದು ಪ್ರಾರ್ಥಿಸಲು ಶ್ರೇಷ್ಠ ನ್ಯಾಯಾಧೀಶರೊಡನೆ ಸಂಪರ್ಕ ಬೆಳೆಸುತ್ತಿದ್ದೇನೆ’ ಎಂದು ಮುಖ್ಯಮಂತ್ರಿ ಶ್ರೀ ಎಸ್. ನಿಜಲಿಂಗಪ್ಪ ಅವರು ಇಂದು ವಿಧಾನಸಭೆಯಲ್ಲಿ ತಿಳಿಸಿದರು.</p>.<p><strong>ರಾಜೀನಾಮೆ ಕೊಡದಿದ್ದರೆ ಪ್ರಧಾನಿ ತನಕ ದೂರು</strong></p>.<p><strong>ಬೆಂಗಳೂರು, ಡಿ. 14–</strong> ಮಧುಗಿರಿ ತಾಲ್ಲೂಕಿನ ಪ್ರಕರಣದ ಬಗ್ಗೆ ಇಂದು ವಿಧಾನ ಪರಿಷತ್ತಿನಲ್ಲಿ ಚರ್ಚೆಯನ್ನಾರಂಭಿಸಿದ ಪಿ.ಎಸ್.ಪಿ.ಯ ಶ್ರೀ ಎ.ಎಚ್. ಶಿವಾನಂದಸ್ವಾಮಿಯವರು ತಮ್ಮ ದೀರ್ಘ ಭಾಷಣದಲ್ಲಿ ಗೃಹಸಚಿವ ಶ್ರೀ ಎಂ.ವಿ. ರಾಮರಾವ್ರವರು ರಾಜೀನಾಮೆ ಕೊಡಬೇಕೆಂದು ಪದೇ ಪದೇ ಒತ್ತಾಯಪಡಿಸಿ ಅವರು ರಾಜೀನಾಮೆ ಕೊಡದಿದ್ದರೆ ಪ್ರಧಾನಿಯತನಕ ದೂರೊಯ್ಯುವುದಾಗಿ ತಿಳಿಸಿದರು.</p>.<p><strong>ಭಾಷಾ ಮಸೂದೆ ತಿದ್ದುಪಡಿಗೆ ದಕ್ಷಿಣ ರಾಜ್ಯಗಳ ಕಾಂಗ್ರೆಸ್ ಎಂ.ಪಿ.ಗಳ ವಿರೋಧ</strong></p>.<p><strong>(ನಾರಾಯಣಸ್ವಾಮಿ ಅವರಿಂದ)</strong></p>.<p><strong>ನವದೆಹಲಿ, ಡಿ. 14– </strong>ಹಿಂದಿ ಭಾಷೆ ಮಾತನಾಡುವ ರಾಜ್ಯಗಳ ಕಾಂಗ್ರೆಸ್ ಎಂ.ಪಿ.ಗಳ ಟೀಕೆಯನ್ನು ನಿಲ್ಲಿಸುವುದಕ್ಕಾಗಿ ಅಧಿಕೃತ ಭಾಷಾ ಮಸೂದೆಗೆ ತಿದ್ದುಪಡಿಗಳನ್ನು ಸರಕಾರ ಅಂಗೀಕರಿಸಿರುವ ಬಗ್ಗೆ ದಕ್ಷಿಣ ರಾಜ್ಯಗಳ ಸದಸ್ಯರು ಇಂದು ತೀವ್ರ ವಿರೋಧ ವ್ಯಕ್ತಪಡಿಸಿದರು.</p>.<p><strong>ಮುಂದಿನ ವರ್ಷಕ್ಕೆ ಇನ್ನೂ ಸಣ್ಣ ಯೋಜನೆ: 2000 ಕೋಟಿ ರೂ.?</strong></p>.<p><strong>ನವದೆಹಲಿ, ಡಿ. 14– </strong>ಮುಂದಿನ ವರ್ಷದ ‘ವಾರ್ಷಿಕ ಯೋಜನೆ’ ಕುರಿತ ಸಂಪನ್ಮೂಲಗಳ ಬಗ್ಗೆ ಯೋಜನಾ ಆಯೋಗದ ಉಪಾಧ್ಯಕ್ಷ ಡಾ. ಡಿ.ಆರ್. ಗಾಡ್ಗೀಳ್ ಮತ್ತು ಉಪ ಪ್ರಧಾನಮಂತ್ರಿ ಶ್ರೀ ಮುರಾರಜಿ ದೇಸಾಯಿಯವರು ಇಂದು ಇಲ್ಲಿ ವಿಚಾರ ವಿನಿಮಯ ನಡೆಸಿದರು.</p>.<p><strong>ಸರ್ಕಾರಿ ಕ್ಷೇತ್ರದ ಬಗ್ಗೆ ರಾಜ್ಯ ಸಭೆಯಲ್ಲಿ ಟೀಕೆ</strong></p>.<p><strong>ನವದೆಹಲಿ, ಡಿ. 14–</strong> ನಾಲ್ಕನೆ ಯೋಜನೆ ಮುಂದೂಡಿಕೆ ಬಗ್ಗೆ ಪ್ರಧಾನಿ ನೀಡಿದ ಹೇಳಿಕೆ ಮೇಲೆ ನಡೆದ ಚರ್ಚೆಯ ಕಾಲದಲ್ಲಿ ಇಂದು ರಾಜ್ಯಸಭೆಯಲ್ಲಿ ಸರ್ಕಾರಿ ಕ್ಷೇತ್ರದ ಉದ್ಯಮಗಳು ಉಗ್ರ ಟೀಕೆಗೆ ಗುರಿಯಾದವು.</p>.<p>ಯೋಜನೆಗೆ ತಳಹದಿಯಾದ ಕೃಷಿಗೆ ಮಹತ್ವ ನೀಡಬೇಕೆಂದು ಮಾತನಾಡಿದ್ದ ಎಲ್ಲಾ ಸದಸ್ಯರು ಒತ್ತಾಯ ಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಧುಗಿರಿ ಪ್ರಕರಣದ ನ್ಯಾಯಾಂಗ ತನಿಖೆ</strong></p>.<p><strong>ಬೆಂಗಳೂರು, ಡಿ. 14– </strong>ಮಧುಗಿರಿ ತಾಲ್ಲೂಕಿನ ಕೆಲವು ಗ್ರಾಮಗಳಲ್ಲಿ ನಡೆದಿರುವ ಪೊಲೀಸ್ ಅತ್ಯಾಚಾರದ ಬಗ್ಗೆ ನ್ಯಾಯಾಂಗಾಧಿಕಾರಿಯಿಂದ ವಿಚಾರಣೆ ಏರ್ಪಡಿಸಲು ರಾಜ್ಯ ಸರಕಾರ ತೀರ್ಮಾನಿಸಿದೆ.</p>.<p>‘ನ್ಯಾಯಾಂಗಾಧಿಕಾರಿಯಿಂದ ವಿಚಾರಣೆ ನಡೆಸಲು, ಯಾವ ನ್ಯಾಯ ಮೂರ್ತಿಯ ಸೇವೆಯನ್ನು ಒದಗಿಸಲು ಸಾಧ್ಯ ಎಂದು ಪ್ರಾರ್ಥಿಸಲು ಶ್ರೇಷ್ಠ ನ್ಯಾಯಾಧೀಶರೊಡನೆ ಸಂಪರ್ಕ ಬೆಳೆಸುತ್ತಿದ್ದೇನೆ’ ಎಂದು ಮುಖ್ಯಮಂತ್ರಿ ಶ್ರೀ ಎಸ್. ನಿಜಲಿಂಗಪ್ಪ ಅವರು ಇಂದು ವಿಧಾನಸಭೆಯಲ್ಲಿ ತಿಳಿಸಿದರು.</p>.<p><strong>ರಾಜೀನಾಮೆ ಕೊಡದಿದ್ದರೆ ಪ್ರಧಾನಿ ತನಕ ದೂರು</strong></p>.<p><strong>ಬೆಂಗಳೂರು, ಡಿ. 14–</strong> ಮಧುಗಿರಿ ತಾಲ್ಲೂಕಿನ ಪ್ರಕರಣದ ಬಗ್ಗೆ ಇಂದು ವಿಧಾನ ಪರಿಷತ್ತಿನಲ್ಲಿ ಚರ್ಚೆಯನ್ನಾರಂಭಿಸಿದ ಪಿ.ಎಸ್.ಪಿ.ಯ ಶ್ರೀ ಎ.ಎಚ್. ಶಿವಾನಂದಸ್ವಾಮಿಯವರು ತಮ್ಮ ದೀರ್ಘ ಭಾಷಣದಲ್ಲಿ ಗೃಹಸಚಿವ ಶ್ರೀ ಎಂ.ವಿ. ರಾಮರಾವ್ರವರು ರಾಜೀನಾಮೆ ಕೊಡಬೇಕೆಂದು ಪದೇ ಪದೇ ಒತ್ತಾಯಪಡಿಸಿ ಅವರು ರಾಜೀನಾಮೆ ಕೊಡದಿದ್ದರೆ ಪ್ರಧಾನಿಯತನಕ ದೂರೊಯ್ಯುವುದಾಗಿ ತಿಳಿಸಿದರು.</p>.<p><strong>ಭಾಷಾ ಮಸೂದೆ ತಿದ್ದುಪಡಿಗೆ ದಕ್ಷಿಣ ರಾಜ್ಯಗಳ ಕಾಂಗ್ರೆಸ್ ಎಂ.ಪಿ.ಗಳ ವಿರೋಧ</strong></p>.<p><strong>(ನಾರಾಯಣಸ್ವಾಮಿ ಅವರಿಂದ)</strong></p>.<p><strong>ನವದೆಹಲಿ, ಡಿ. 14– </strong>ಹಿಂದಿ ಭಾಷೆ ಮಾತನಾಡುವ ರಾಜ್ಯಗಳ ಕಾಂಗ್ರೆಸ್ ಎಂ.ಪಿ.ಗಳ ಟೀಕೆಯನ್ನು ನಿಲ್ಲಿಸುವುದಕ್ಕಾಗಿ ಅಧಿಕೃತ ಭಾಷಾ ಮಸೂದೆಗೆ ತಿದ್ದುಪಡಿಗಳನ್ನು ಸರಕಾರ ಅಂಗೀಕರಿಸಿರುವ ಬಗ್ಗೆ ದಕ್ಷಿಣ ರಾಜ್ಯಗಳ ಸದಸ್ಯರು ಇಂದು ತೀವ್ರ ವಿರೋಧ ವ್ಯಕ್ತಪಡಿಸಿದರು.</p>.<p><strong>ಮುಂದಿನ ವರ್ಷಕ್ಕೆ ಇನ್ನೂ ಸಣ್ಣ ಯೋಜನೆ: 2000 ಕೋಟಿ ರೂ.?</strong></p>.<p><strong>ನವದೆಹಲಿ, ಡಿ. 14– </strong>ಮುಂದಿನ ವರ್ಷದ ‘ವಾರ್ಷಿಕ ಯೋಜನೆ’ ಕುರಿತ ಸಂಪನ್ಮೂಲಗಳ ಬಗ್ಗೆ ಯೋಜನಾ ಆಯೋಗದ ಉಪಾಧ್ಯಕ್ಷ ಡಾ. ಡಿ.ಆರ್. ಗಾಡ್ಗೀಳ್ ಮತ್ತು ಉಪ ಪ್ರಧಾನಮಂತ್ರಿ ಶ್ರೀ ಮುರಾರಜಿ ದೇಸಾಯಿಯವರು ಇಂದು ಇಲ್ಲಿ ವಿಚಾರ ವಿನಿಮಯ ನಡೆಸಿದರು.</p>.<p><strong>ಸರ್ಕಾರಿ ಕ್ಷೇತ್ರದ ಬಗ್ಗೆ ರಾಜ್ಯ ಸಭೆಯಲ್ಲಿ ಟೀಕೆ</strong></p>.<p><strong>ನವದೆಹಲಿ, ಡಿ. 14–</strong> ನಾಲ್ಕನೆ ಯೋಜನೆ ಮುಂದೂಡಿಕೆ ಬಗ್ಗೆ ಪ್ರಧಾನಿ ನೀಡಿದ ಹೇಳಿಕೆ ಮೇಲೆ ನಡೆದ ಚರ್ಚೆಯ ಕಾಲದಲ್ಲಿ ಇಂದು ರಾಜ್ಯಸಭೆಯಲ್ಲಿ ಸರ್ಕಾರಿ ಕ್ಷೇತ್ರದ ಉದ್ಯಮಗಳು ಉಗ್ರ ಟೀಕೆಗೆ ಗುರಿಯಾದವು.</p>.<p>ಯೋಜನೆಗೆ ತಳಹದಿಯಾದ ಕೃಷಿಗೆ ಮಹತ್ವ ನೀಡಬೇಕೆಂದು ಮಾತನಾಡಿದ್ದ ಎಲ್ಲಾ ಸದಸ್ಯರು ಒತ್ತಾಯ ಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>