<blockquote>ಪರಿಸರ ಹಾಗೂ ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಶ್ರಮಿಸಿದ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ಅವರು ಬುಧವಾರ ರಾತ್ರಿ ನಿಧನರಾಗಿದ್ದಾರೆ.</blockquote>. <h2>ಆರಂಭಿಕ ಜೀವನ:</h2>.<p>ಗಾಡ್ಗೀಳ್ ಅವರು, 1942ರ ಮೇ 24ರಂದು ಮಹಾರಾಷ್ಟ್ರದ ಪುಣೆಯಲ್ಲಿ ಜನಿಸಿದರು. ತಂದೆ ಧನಂಜಯ್ ರಾಮಚಂದ್ರ ಗಾಡ್ಗೀಳ್, ತಾಯಿ ಪ್ರಮೀಳಾ. 1963ರಲ್ಲಿ ಫರ್ಗುಸನ್ ಕಾಲೇಜಿನಲ್ಲಿ ಜೀವಶಾಸ್ತ್ರದಲ್ಲಿ ಪದವಿ ಪಡೆದರು. 1965ರಲ್ಲಿ ಮುಂಬೈ ವಿಶ್ವವಿದ್ಯಾಲಯದಿಂದ ಪ್ರಾಣಿಶಾಸ್ತ್ರ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.</p>.ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ . <h2>ಗಾಡ್ಗೀಳ್ ನೇತೃತ್ವದಲ್ಲಿ ಪಶ್ಚಿಮ ಘಟ್ಟಗಳ ಪರಿಸರ ತಜ್ಞರ ಸಮಿತಿ:</h2><p>ವಿಶ್ವದ ಜೀವವೈವಿಧ್ಯಗಳ ಕಣಜ, ನಿತ್ಯ ಹರಿದ್ವರ್ಣ ಕಾನನದ ತವರು ಎಂದೆಲ್ಲ ಗುರುತಿಸುವ ಪಶ್ಚಿಮಘಟ್ಟ ನಾಶವಾಗುತ್ತದೆ ಎನ್ನುವ ಆತಂಕದ ಮಾತುಗಳು ಎಲ್ಲೆಡೆ ಕೇಳಿಬಂದ ಪರಿಣಾಮ ಕೇಂದ್ರ ಸರ್ಕಾರ 2009ರಲ್ಲಿ ಮಾಧವ್ ಗಾಡ್ಗೀಳ್ ನೇತೃತ್ವದಲ್ಲಿ ಪಶ್ಚಿಮ ಘಟ್ಟಗಳ ಪರಿಸರ ತಜ್ಞರ ಸಮಿತಿಯನ್ನು ರಚಿಸಿತ್ತು.</p>.<p>ಪರಿಸರ ಸೂಕ್ಷ್ಮ ಪ್ರದೇಶಗಳಲ್ಲಿನ ಮಾನವ ಚಟುವಟಿಕೆಗಳಿಗೆ ಕಟ್ಟುನಿಟ್ಟಿನ ನಿರ್ಬಂಧ ಹೇರಬೇಕು ಎಂದು ಗಾಡ್ಗೀಲ್ ನೇತೃತ್ವದ ತಜ್ಞರ ಸಮಿತಿಯು 2011ರಲ್ಲಿ ವರದಿ ನೀಡಿತ್ತು. ಆದರೆ, ಈ ವರದಿಗೆ ಭಾರಿ ಪ್ರತಿರೋಧ ಎದುರಾಗಿತ್ತು. ಘಟ್ಟ ಪ್ರದೇಶದ ಜನರು ಮತ್ತು ರಾಜಕೀಯ ನಾಯಕರು ಕೂಡ ವರದಿಯನ್ನು ವಿರೋಧಿಸಿದ್ದರು.</p>.ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ ಮಾಧವ ಗಾಡ್ಗೀಳ್ ಸಲ್ಲಿಸಿದ್ದ ವರದಿಯಲ್ಲಿ ಏನಿತ್ತು?.<h2> ಬಯೋಸ್ಪಿಯರ್ ರಿಸರ್ವ್ ಸ್ಥಾಪಿಸುವಲ್ಲಿ ಪ್ರಮುಖ ಪಾತ್ರ</h2><p>1986ರಲ್ಲಿ ದೇಶದ ಮೊದಲ ಬಯೋಸ್ಪಿಯರ್ ರಿಸರ್ವ್ (ನೀಲಗಿರಿ) ಸ್ಥಾಪಿಸುವಲ್ಲಿ ಇವರು ಪ್ರಮುಖ ಪಾತ್ರ ವಹಿಸಿದ್ದರು. ಇದಕ್ಕಾಗಿ ಅವರು ಪಶ್ಚಿಮ ಘಟ್ಟದ 3 ರಾಜ್ಯಗಳ ಅರಣ್ಯದಲ್ಲಿ ಪಾದಯಾತ್ರೆ ನಡೆಸಿ, ಅಲ್ಲಿನ ಆದಿವಾಸಿಗಳು ಮತ್ತು ಅರಣ್ಯವಾಸಿಗಳೊಂದಿಗೆ ದಿನಗಳನ್ನು ಕಳೆದು ಪರಿಸರ ಪರಿಸ್ಥಿತಿ ಬಗ್ಗೆ ಅಧ್ಯಯನ ಮಾಡಿದ್ದರು.</p>.<h2>ವೈಜ್ಞಾನಿಕ ಸಲಹಾ ಮಂಡಳಿಯಲ್ಲಿ ಕಾರ್ಯ</h2><p>1986 ರಿಂದ 1990ರ ವರೆಗೆ ಪ್ರಧಾನ ಮಂತ್ರಿಯವರ (ರಾಜೀವ್ ಗಾಂಧಿ ಮತ್ತು ವಿ.ಪಿ. ಸಿಂಗ್) ವೈಜ್ಞಾನಿಕ ಸಲಹಾ ಮಂಡಳಿಯ ಸದಸ್ಯರಾಗಿಯೂ ಗಾಡ್ಗೀಳ್ ಕಾರ್ಯ ನಿರ್ವಹಿಸಿದ್ದರು. </p> .<blockquote>ಪ್ರಶಸ್ತಿಗಳು</blockquote>.<h2>‘ಚಾಂಪಿಯನ್ಸ್ ಆಫ್ ದಿ ಅರ್ತ್’ ಪ್ರಶಸ್ತಿ</h2>.<p>ಪಶ್ಚಿಮ ಘಟ್ಟಗಳ ಜೀವ ವೈವಿಧ್ಯ ಕುರಿತು ಮಾಧವ ಗಾಡ್ಗೀಳ್ ಅವರು ಮಾಡಿರುವ ಕಾರ್ಯಗಳನ್ನು ಪರಿಗಣಿಸಿ ವಿಶ್ವಸಂಸ್ಥೆಯು 2024ರಲ್ಲಿ ‘ಚಾಂಪಿಯನ್ಸ್ ಆಫ್ ದಿ ಅರ್ತ್’ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.</p><p>ಜನಸಂಖ್ಯಾ ಒತ್ತಡ, ಹವಾಮಾನ ಬದಲಾವಣೆ ಹಾಗೂ ಅಭಿವೃದ್ಧಿ ಚಟುವಟಿಕೆಯಿಂದ ಪಶ್ಚಿಮ ಘಟ್ಟಗಳಲ್ಲಿ ಆಗುತ್ತಿರುವ ಬದಲಾವಣೆ ಕುರಿತು ಅಧ್ಯಯನ ಮಾಡಲು ರಚಿಸಲಾಗಿದ್ದ ಸಮಿತಿಯ ಅಧ್ಯಕ್ಷರಾಗಿ ಗಾಡ್ಗೀಳ್ ಕೆಲಸ ಮಾಡಿದ್ದರು. 2011ರಲ್ಲಿ ಈ ಸಮಿತಿಯು ಪಶ್ಚಿಮ ಘಟ್ಟಗಳನ್ನು ಪರಿಸರ ಸೂಕ್ಷ್ಮ ಪ್ರದೇಶಗಳೆಂದು ಘೋಷಿಸಬೇಕು ಎಂದು ವರದಿ ಸಲ್ಲಿಸಿತ್ತು. </p>.<ul><li><p>1981ರಲ್ಲಿ ಪದ್ಮಶ್ರೀ ಮತ್ತು 2006ರಲ್ಲಿ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ.</p> </li></ul> .<h2>ಪ್ರಮುಖ ಹೇಳಿಕೆಗಳು</h2>.<ul><li><p>ಜನರನ್ನು ಹೊರದಬ್ಬುವ ಮೂಲಕ ಪರಿಸರ ಸಂರಕ್ಷಣೆ ಸಾಧ್ಯವಿಲ್ಲ. ಸ್ಥಳೀಯ ಸಮುದಾಯಗಳು ಸಮಸ್ಯೆಯಲ್ಲ, ಅವುಗಳೇ ಪರಿಹಾರ.</p></li><li><p>ಅಭಿವೃದ್ಧಿ ಉಚಿತವಲ್ಲ. ಅದು ಯಾವಾಗಲೂ ಪರಿಸರ ಮತ್ತು ಸಾಮಾಜಿಕ ಪರಿಣಾಮಗಳನ್ನು ಒಳಗೊಂಡಿರುತ್ತದೆ.</p></li><li><p>ಪಶ್ಚಿಮ ಘಟ್ಟಗಳು ಕೇವಲ ನಕ್ಷೆಯಲ್ಲಿರುವ ಕೇವಲ ಒಂದು ರೇಖೆಯಲ್ಲ, ಬದಲಾಗಿ ಅದು ಒಂದು ಜೀವ ವ್ಯವಸ್ಥೆ </p></li></ul> <p><strong>–ಮಾಧವ ಗಾಡ್ಗೀಳ್</strong></p> .ಒಳನೋಟ | ಗಾಡ್ಗೀಳ್, ಕಸ್ತೂರಿರಂಗನ್ ವರದಿಗಳ ಸಾರ ಏನು?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<blockquote>ಪರಿಸರ ಹಾಗೂ ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಶ್ರಮಿಸಿದ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ಅವರು ಬುಧವಾರ ರಾತ್ರಿ ನಿಧನರಾಗಿದ್ದಾರೆ.</blockquote>. <h2>ಆರಂಭಿಕ ಜೀವನ:</h2>.<p>ಗಾಡ್ಗೀಳ್ ಅವರು, 1942ರ ಮೇ 24ರಂದು ಮಹಾರಾಷ್ಟ್ರದ ಪುಣೆಯಲ್ಲಿ ಜನಿಸಿದರು. ತಂದೆ ಧನಂಜಯ್ ರಾಮಚಂದ್ರ ಗಾಡ್ಗೀಳ್, ತಾಯಿ ಪ್ರಮೀಳಾ. 1963ರಲ್ಲಿ ಫರ್ಗುಸನ್ ಕಾಲೇಜಿನಲ್ಲಿ ಜೀವಶಾಸ್ತ್ರದಲ್ಲಿ ಪದವಿ ಪಡೆದರು. 1965ರಲ್ಲಿ ಮುಂಬೈ ವಿಶ್ವವಿದ್ಯಾಲಯದಿಂದ ಪ್ರಾಣಿಶಾಸ್ತ್ರ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.</p>.ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ . <h2>ಗಾಡ್ಗೀಳ್ ನೇತೃತ್ವದಲ್ಲಿ ಪಶ್ಚಿಮ ಘಟ್ಟಗಳ ಪರಿಸರ ತಜ್ಞರ ಸಮಿತಿ:</h2><p>ವಿಶ್ವದ ಜೀವವೈವಿಧ್ಯಗಳ ಕಣಜ, ನಿತ್ಯ ಹರಿದ್ವರ್ಣ ಕಾನನದ ತವರು ಎಂದೆಲ್ಲ ಗುರುತಿಸುವ ಪಶ್ಚಿಮಘಟ್ಟ ನಾಶವಾಗುತ್ತದೆ ಎನ್ನುವ ಆತಂಕದ ಮಾತುಗಳು ಎಲ್ಲೆಡೆ ಕೇಳಿಬಂದ ಪರಿಣಾಮ ಕೇಂದ್ರ ಸರ್ಕಾರ 2009ರಲ್ಲಿ ಮಾಧವ್ ಗಾಡ್ಗೀಳ್ ನೇತೃತ್ವದಲ್ಲಿ ಪಶ್ಚಿಮ ಘಟ್ಟಗಳ ಪರಿಸರ ತಜ್ಞರ ಸಮಿತಿಯನ್ನು ರಚಿಸಿತ್ತು.</p>.<p>ಪರಿಸರ ಸೂಕ್ಷ್ಮ ಪ್ರದೇಶಗಳಲ್ಲಿನ ಮಾನವ ಚಟುವಟಿಕೆಗಳಿಗೆ ಕಟ್ಟುನಿಟ್ಟಿನ ನಿರ್ಬಂಧ ಹೇರಬೇಕು ಎಂದು ಗಾಡ್ಗೀಲ್ ನೇತೃತ್ವದ ತಜ್ಞರ ಸಮಿತಿಯು 2011ರಲ್ಲಿ ವರದಿ ನೀಡಿತ್ತು. ಆದರೆ, ಈ ವರದಿಗೆ ಭಾರಿ ಪ್ರತಿರೋಧ ಎದುರಾಗಿತ್ತು. ಘಟ್ಟ ಪ್ರದೇಶದ ಜನರು ಮತ್ತು ರಾಜಕೀಯ ನಾಯಕರು ಕೂಡ ವರದಿಯನ್ನು ವಿರೋಧಿಸಿದ್ದರು.</p>.ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ ಮಾಧವ ಗಾಡ್ಗೀಳ್ ಸಲ್ಲಿಸಿದ್ದ ವರದಿಯಲ್ಲಿ ಏನಿತ್ತು?.<h2> ಬಯೋಸ್ಪಿಯರ್ ರಿಸರ್ವ್ ಸ್ಥಾಪಿಸುವಲ್ಲಿ ಪ್ರಮುಖ ಪಾತ್ರ</h2><p>1986ರಲ್ಲಿ ದೇಶದ ಮೊದಲ ಬಯೋಸ್ಪಿಯರ್ ರಿಸರ್ವ್ (ನೀಲಗಿರಿ) ಸ್ಥಾಪಿಸುವಲ್ಲಿ ಇವರು ಪ್ರಮುಖ ಪಾತ್ರ ವಹಿಸಿದ್ದರು. ಇದಕ್ಕಾಗಿ ಅವರು ಪಶ್ಚಿಮ ಘಟ್ಟದ 3 ರಾಜ್ಯಗಳ ಅರಣ್ಯದಲ್ಲಿ ಪಾದಯಾತ್ರೆ ನಡೆಸಿ, ಅಲ್ಲಿನ ಆದಿವಾಸಿಗಳು ಮತ್ತು ಅರಣ್ಯವಾಸಿಗಳೊಂದಿಗೆ ದಿನಗಳನ್ನು ಕಳೆದು ಪರಿಸರ ಪರಿಸ್ಥಿತಿ ಬಗ್ಗೆ ಅಧ್ಯಯನ ಮಾಡಿದ್ದರು.</p>.<h2>ವೈಜ್ಞಾನಿಕ ಸಲಹಾ ಮಂಡಳಿಯಲ್ಲಿ ಕಾರ್ಯ</h2><p>1986 ರಿಂದ 1990ರ ವರೆಗೆ ಪ್ರಧಾನ ಮಂತ್ರಿಯವರ (ರಾಜೀವ್ ಗಾಂಧಿ ಮತ್ತು ವಿ.ಪಿ. ಸಿಂಗ್) ವೈಜ್ಞಾನಿಕ ಸಲಹಾ ಮಂಡಳಿಯ ಸದಸ್ಯರಾಗಿಯೂ ಗಾಡ್ಗೀಳ್ ಕಾರ್ಯ ನಿರ್ವಹಿಸಿದ್ದರು. </p> .<blockquote>ಪ್ರಶಸ್ತಿಗಳು</blockquote>.<h2>‘ಚಾಂಪಿಯನ್ಸ್ ಆಫ್ ದಿ ಅರ್ತ್’ ಪ್ರಶಸ್ತಿ</h2>.<p>ಪಶ್ಚಿಮ ಘಟ್ಟಗಳ ಜೀವ ವೈವಿಧ್ಯ ಕುರಿತು ಮಾಧವ ಗಾಡ್ಗೀಳ್ ಅವರು ಮಾಡಿರುವ ಕಾರ್ಯಗಳನ್ನು ಪರಿಗಣಿಸಿ ವಿಶ್ವಸಂಸ್ಥೆಯು 2024ರಲ್ಲಿ ‘ಚಾಂಪಿಯನ್ಸ್ ಆಫ್ ದಿ ಅರ್ತ್’ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.</p><p>ಜನಸಂಖ್ಯಾ ಒತ್ತಡ, ಹವಾಮಾನ ಬದಲಾವಣೆ ಹಾಗೂ ಅಭಿವೃದ್ಧಿ ಚಟುವಟಿಕೆಯಿಂದ ಪಶ್ಚಿಮ ಘಟ್ಟಗಳಲ್ಲಿ ಆಗುತ್ತಿರುವ ಬದಲಾವಣೆ ಕುರಿತು ಅಧ್ಯಯನ ಮಾಡಲು ರಚಿಸಲಾಗಿದ್ದ ಸಮಿತಿಯ ಅಧ್ಯಕ್ಷರಾಗಿ ಗಾಡ್ಗೀಳ್ ಕೆಲಸ ಮಾಡಿದ್ದರು. 2011ರಲ್ಲಿ ಈ ಸಮಿತಿಯು ಪಶ್ಚಿಮ ಘಟ್ಟಗಳನ್ನು ಪರಿಸರ ಸೂಕ್ಷ್ಮ ಪ್ರದೇಶಗಳೆಂದು ಘೋಷಿಸಬೇಕು ಎಂದು ವರದಿ ಸಲ್ಲಿಸಿತ್ತು. </p>.<ul><li><p>1981ರಲ್ಲಿ ಪದ್ಮಶ್ರೀ ಮತ್ತು 2006ರಲ್ಲಿ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ.</p> </li></ul> .<h2>ಪ್ರಮುಖ ಹೇಳಿಕೆಗಳು</h2>.<ul><li><p>ಜನರನ್ನು ಹೊರದಬ್ಬುವ ಮೂಲಕ ಪರಿಸರ ಸಂರಕ್ಷಣೆ ಸಾಧ್ಯವಿಲ್ಲ. ಸ್ಥಳೀಯ ಸಮುದಾಯಗಳು ಸಮಸ್ಯೆಯಲ್ಲ, ಅವುಗಳೇ ಪರಿಹಾರ.</p></li><li><p>ಅಭಿವೃದ್ಧಿ ಉಚಿತವಲ್ಲ. ಅದು ಯಾವಾಗಲೂ ಪರಿಸರ ಮತ್ತು ಸಾಮಾಜಿಕ ಪರಿಣಾಮಗಳನ್ನು ಒಳಗೊಂಡಿರುತ್ತದೆ.</p></li><li><p>ಪಶ್ಚಿಮ ಘಟ್ಟಗಳು ಕೇವಲ ನಕ್ಷೆಯಲ್ಲಿರುವ ಕೇವಲ ಒಂದು ರೇಖೆಯಲ್ಲ, ಬದಲಾಗಿ ಅದು ಒಂದು ಜೀವ ವ್ಯವಸ್ಥೆ </p></li></ul> <p><strong>–ಮಾಧವ ಗಾಡ್ಗೀಳ್</strong></p> .ಒಳನೋಟ | ಗಾಡ್ಗೀಳ್, ಕಸ್ತೂರಿರಂಗನ್ ವರದಿಗಳ ಸಾರ ಏನು?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>