ರಾಜ್ಯ ಸರ್ಕಾರವು ಟಿಪ್ಪು ಜಯಂತಿ ಆಚರಣೆ ರದ್ದು ಮಾಡಿರುವುದು ಸ್ವಾಗತಾರ್ಹ. ಆದರೆ ಗಾಂಧೀಜಿ ಹಾಗೂ ಡಾ. ಬಿ.ಆರ್.ಅಂಬೇಡ್ಕರ್ ಅವರ ಜಯಂತಿಗಳನ್ನು ಸರ್ಕಾರವೇ ಆಚರಿಸಲಿ.
ಈ ಇಬ್ಬರೂ ದೇಶದ ಎರಡು ಕಣ್ಣುಗಳಿದ್ದಂತೆ. ಸರ್ಕಾರದ ವತಿಯಿಂದ ಇವರ ಜಯಂತಿ ಆಚರಿಸುವುದಕ್ಕೆ ಯಾವ ಸಮುದಾಯದ ವಿರೋಧವೂ ಇರಲಾರದು. ನಮ್ಮ ಸರ್ಕಾರಗಳು ಅಭಿವೃದ್ಧಿ ಕಡೆ ಗಮನ ಕೊಡಬೇಕು. ಅದುಬಿಟ್ಟು, ಅಭಿವೃದ್ಧಿಗೆ ಪೂರಕವಲ್ಲದ ಜಯಂತಿ ಆಚರಣೆಗಳಲ್ಲಿ ಕಾಲಹರಣ ಮಾಡುವುದು ಸರಿಯಲ್ಲ. -ಭೀಮಾಶಂಕರ ಹಳಿಸಗರ, ಶಹಾಪುರ