ಈಗಾಗಲೇ ರಾಜ್ಯದಾದ್ಯಂತ ವ್ಯಾಪಿಸಿ ಸಾವಿರಾರು ಸಂಖ್ಯೆಯಲ್ಲಿ ಜಾನುವಾರುಗಳನ್ನು ಬಲಿ ಪಡೆದಿರುವ ಚರ್ಮಗಂಟು ರೋಗಕ್ಕೆ ಸಂಬಂಧಿಸಿದಂತೆ ಸರ್ಕಾರವು ಸಕಾಲಿಕವಾಗಿ ಸಮರ್ಪಕ ಕ್ರಮಗಳನ್ನು ಕೈಗೊಳ್ಳದೇ ಇರುವುದನ್ನು ಪಶುಸಂಗೋಪನಾ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ವರದಿ (ಪ್ರ.ವಾ., ನ. 22) ಎತ್ತಿತೋರಿಸುವಂತಿದೆ. ರೋಗವನ್ನು ನಿಯಂತ್ರಿಸಲು ಲಸಿಕೆಯಿದ್ದಾಗ್ಯೂ ಅದನ್ನು ಖರೀದಿಸಿ ದಾಸ್ತಾನು ಇರಿಸಿಕೊಂಡಿದ್ದಾಗ್ಯೂ ಲಸಿಕೆ ಹಾಕಲು ಅಗತ್ಯ ಸಿಬ್ಬಂದಿಯ ಕೊರತೆ ಇದೆ ಎಂದು ಅಧಿಕಾರಿಗಳು ಹೇಳುತ್ತಾರೆ ಎಂದರೆ ಇದಕ್ಕೆ ಏನು ಹೇಳಬೇಕೋ!