<p>ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಫೆಬ್ರುವರಿ 4 ರಂದು ಬೆಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಹದಾಯಿ ವಿಚಾರವಾಗಿ ಚಕಾರವೆತ್ತಲಿಲ್ಲ. ಅಂದು ಅವರು ತಮ್ಮ ಪಕ್ಷದ ಸಮಾರಂಭದಲ್ಲಿ ಭಾಗವಹಿಸಲು ಬಂದಿದ್ದರಿಂದ ಈ ವಿಷಯ ಪ್ರಸ್ತಾಪಿಸಲಿಲ್ಲ ಎಂದುಕೊಳ್ಳಬಹುದು.</p>.<p>ಆದರೆ, ಫೆಬ್ರುವರಿ 6ರಂದು, ಮಹದಾಯಿ ನದಿ ನೀರು ಹಂಚಿಕೆ ವಿಚಾರವಾಗಿ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಬೇಕು ಎಂದು ರಾಜ್ಯದ ಸಂಸದರು ಲೋಕಸಭೆಯಲ್ಲಿ ಜಟಾಪಟಿ ನಡೆಸಿದಾಗಲೂ ಪ್ರಧಾನಿ ಮೌನ ವಹಿಸಿದ್ದು ಸರಿಯಲ್ಲ.</p>.<p>ಪ್ರಧಾನಿಯ ಸಮ್ಮುಖದಲ್ಲೇ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರು ಈ ವಿಷಯದ ಬಗ್ಗೆ ಆರೋಪ, ಪ್ರತ್ಯಾರೋಪ ನಡೆಸಿದಾಗ, ಅವರು ಮಧ್ಯಪ್ರವೇಶಿಸಿ ಮಹದಾಯಿ ಕುರಿತು ತಮ್ಮ ನಿಲುವು ಸ್ಪಷ್ಟಪಡಿಸಬಹುದಿತ್ತು. ದೇಶದ ಒಕ್ಕೂಟ ವ್ಯವಸ್ಥೆಯ ಸಂರಕ್ಷಕರಾದ ಪ್ರಧಾನಿ, ಈಗಲಾದರೂ ಜವಾಬ್ದಾರಿಯ ನಡೆ ಪ್ರದರ್ಶಿಸಿ, ಕುಡಿಯುವ ನೀರಿನ ಜ್ವಲಂತ ಸಮಸ್ಯೆ ಪರಿಹಾರಕ್ಕೆ ಮುಂದಾಗಬಾರದೇಕೆ?</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಫೆಬ್ರುವರಿ 4 ರಂದು ಬೆಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಹದಾಯಿ ವಿಚಾರವಾಗಿ ಚಕಾರವೆತ್ತಲಿಲ್ಲ. ಅಂದು ಅವರು ತಮ್ಮ ಪಕ್ಷದ ಸಮಾರಂಭದಲ್ಲಿ ಭಾಗವಹಿಸಲು ಬಂದಿದ್ದರಿಂದ ಈ ವಿಷಯ ಪ್ರಸ್ತಾಪಿಸಲಿಲ್ಲ ಎಂದುಕೊಳ್ಳಬಹುದು.</p>.<p>ಆದರೆ, ಫೆಬ್ರುವರಿ 6ರಂದು, ಮಹದಾಯಿ ನದಿ ನೀರು ಹಂಚಿಕೆ ವಿಚಾರವಾಗಿ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಬೇಕು ಎಂದು ರಾಜ್ಯದ ಸಂಸದರು ಲೋಕಸಭೆಯಲ್ಲಿ ಜಟಾಪಟಿ ನಡೆಸಿದಾಗಲೂ ಪ್ರಧಾನಿ ಮೌನ ವಹಿಸಿದ್ದು ಸರಿಯಲ್ಲ.</p>.<p>ಪ್ರಧಾನಿಯ ಸಮ್ಮುಖದಲ್ಲೇ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರು ಈ ವಿಷಯದ ಬಗ್ಗೆ ಆರೋಪ, ಪ್ರತ್ಯಾರೋಪ ನಡೆಸಿದಾಗ, ಅವರು ಮಧ್ಯಪ್ರವೇಶಿಸಿ ಮಹದಾಯಿ ಕುರಿತು ತಮ್ಮ ನಿಲುವು ಸ್ಪಷ್ಟಪಡಿಸಬಹುದಿತ್ತು. ದೇಶದ ಒಕ್ಕೂಟ ವ್ಯವಸ್ಥೆಯ ಸಂರಕ್ಷಕರಾದ ಪ್ರಧಾನಿ, ಈಗಲಾದರೂ ಜವಾಬ್ದಾರಿಯ ನಡೆ ಪ್ರದರ್ಶಿಸಿ, ಕುಡಿಯುವ ನೀರಿನ ಜ್ವಲಂತ ಸಮಸ್ಯೆ ಪರಿಹಾರಕ್ಕೆ ಮುಂದಾಗಬಾರದೇಕೆ?</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>