ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಾಣಿಗಳಿಗೇಕೆ ಹಿಂಸೆ?

Last Updated 11 ಸೆಪ್ಟೆಂಬರ್ 2018, 19:30 IST
ಅಕ್ಷರ ಗಾತ್ರ

ಪೆಟ್ರೋಲ್ ಬೆಲೆ ಏರಿಕೆಯನ್ನು ನಿಯಂತ್ರಿಸಲುಕ್ರಮ ಕೈಗೊಳ್ಳದಿರುವ ಸರ್ಕಾರದ ನಿಲುವನ್ನು ಖಂಡಿಸಲೇಬೇಕು. ಸರ್ಕಾರದ ನೀತಿಯನ್ನು ಖಂಡಿಸಿ ಪ್ರತಿಭಟನೆ ನಡೆಸುವುದು ಜನರ ಹಕ್ಕು. ಎಲ್ಲ ಸರಿ, ಆದರೆ ಇಂಥ ಪ್ರತಿಭಟನೆಗಾಗಿ ಮೂಕ ಪ್ರಾಣಿಗಳನ್ನು ಹಿಂಸಿಸುವುದು ಅಮಾನವೀಯ.

ಭಾರತ್ ಬಂದ್ ಅಂಗವಾಗಿ ಬೆಂಗಳೂರಿನಲ್ಲಿ ನಡೆಸಿದ್ದ ಪ್ರತಿಭಟನೆಯಲ್ಲಿ, ಗಾಡಿಯ ಮೇಲೇರಿದ್ದ ಹತ್ತಕ್ಕೂ ಹೆಚ್ಚು ಜನರನ್ನು ಎಳೆಯಲು ಎತ್ತುಗಳನ್ನು ಬಳಸಿರುವುದು ಖಂಡನೀಯ. ರಾಜಕೀಯ ನಾಯಕರ ತೆವಲಿಗೆ ಕತ್ತೆ, ಎಮ್ಮೆ, ಎತ್ತುಗಳಂತಹ ಮೂಕ ಪ್ರಾಣಿಗಳು ಬಲಿಪಶುಗಳಾಗಬೇಕೇ?

ಸಿ. ಕೃಷ್ಣ, ಲಕ್ಕವನಹಳ್ಳಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT