ಕೊರೊನಾ ವೈರಸ್ ಪರಿಣಾಮವಾಗಿ ತುರ್ತು ಪ್ರಕರಣಗಳ ಹೊರತಾಗಿ ಕಕ್ಷಿದಾರರು ಮತ್ತು ವಕೀಲರು ಕಲಾಪದಲ್ಲಿ ಭಾಗವಹಿಸುವ ಅವಶ್ಯಕತೆ ಇಲ್ಲ ಎಂದು ಹೈಕೋರ್ಟ್ ಪ್ರಕಟಣೆ ಹೊರಡಿಸಿದೆ. ಆದರೂ ಅಧೀನ ನ್ಯಾಯಾಲಯಗಳು ಕಾರ್ಯನಿರ್ವಹಿಸುತ್ತಿರುವ ಕಾರಣ, ಕೆಲವು ಕಕ್ಷಿದಾರರು ನ್ಯಾಯಾಲಯಕ್ಕೆ ಹಾಜರಾಗುತ್ತಿದ್ದಾರೆ. ಈ ಸಂದರ್ಭದಲ್ಲಿ, ಮುಂದಿನ ತಿಂಗಳು ಇರುವ ಬೇಸಿಗೆ ರಜೆಯನ್ನು ಮುಂಚಿತವಾಗಿಯೇ ನೀಡಿ, ಪರಿಸ್ಥಿತಿ ನಿಯಂತ್ರಣಕ್ಕೆ ಬಂದ ನಂತರ ರಜೆ ದಿನಗಳಲ್ಲಿ ಕಾರ್ಯನಿರ್ವಹಿಸುವಂತೆ ವ್ಯವಸ್ಥೆ ಮಾಡಿದರೆ, ವೈರಾಣು ಹರಡದಂತೆ ತಡೆಯಲು ಅನುಕೂಲವಾಗುತ್ತದೆ.