ಪ್ರತಿಭಟನೆಗಳು ಶಾಂತಿಯುತವಾಗಿ ನಡೆದರೆ ನಿಷೇಧಾಜ್ಞೆ ಜಾರಿ ಮಾಡುವ ಅವಶ್ಯಕತೆ ಇರದು. ಇದು ಗೊತ್ತಿದ್ದೂ ವಿರೋಧಕ್ಕಾಗಿ ವಿರೋಧ ಮಾಡಿದರೆ ಏನು ಪ್ರಯೋಜನ? ರಾಜ್ಯದ ಆಡಳಿತದ ಹೊಣೆ ಹೊತ್ತವರಿಗೆ ಜನರ ಪ್ರಾಣ ಮತ್ತು ನಾಡಿನ ಆಸ್ತಿ ಕಾಪಾಡುವ ಜವಾಬ್ದಾರಿ ಇರುತ್ತದೆ. ಇಂತಹ ಸಂದರ್ಭದಲ್ಲಿ ಸರ್ಕಾರವು ಮುನ್ನೆಚ್ಚರಿಕೆ ವಹಿಸಬೇಕಾಗುತ್ತದೆ. ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ಅನುಭವ ಇರುವ ಸಿದ್ದರಾಮಯ್ಯ ಅವರು ಇದನ್ನು ಅರಿಯರೇ?