ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ರಾಜ್ಯದಲ್ಲಿ 18 ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ದಾಳಿ ಮಾಡಿ, ಅವರ ಬಳಿ ಅಪಾರ ಪ್ರಮಾಣದ ನಗದು, ಚಿನ್ನ ಹಾಗೂ ಇತರ ಆಸ್ತಿ ಇರುವುದನ್ನು ಪತ್ತೆ ಮಾಡಿದೆ. ಈ ಕ್ರಮವು ಸಾರ್ವಜನಿಕರಿಂದ ಮೆಚ್ಚುಗೆ ಪಡೆದಿರಲೂ ಸಾಕು. ಆದರೆ ಅದು ಭ್ರಷ್ಟಾಚಾರ ತಡೆಯುವಲ್ಲಿ ಸಕಾರಾತ್ಮಕ ಪರಿಣಾಮಗಳನ್ನು ಉಂಟುಮಾಡುವುದರ ಬಗ್ಗೆ ಅನುಮಾನಗಳು ಹುಟ್ಟುತ್ತವೆ.