ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ವಿ.ನಾರಾಯಣ ಸ್ವಾಮಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಇತ್ತೀಚೆಗೆ ಪತನವಾದದ್ದು ದುರದೃಷ್ಟಕರ ಬೆಳವಣಿಗೆ. ಕೆಲವು ಕಾಂಗ್ರೆಸ್ ಶಾಸಕರು ಪೈಪೋಟಿಗೆ ಬಿದ್ದವರ ಹಾಗೆ ರಾಜೀನಾಮೆ ನೀಡಿ ಸರ್ಕಾರವನ್ನು ಪತನದ ಅಂಚಿಗೆ ತಂದರು. ಸದನದಲ್ಲಿ ಮುಖ್ಯಮಂತ್ರಿ ತಮ್ಮ ಬಹುಮತ ಸಾಬೀತುಪಡಿಸಬೇಕೆಂಬ ಅಲ್ಲಿನ ನೂತನ ಲೆಫ್ಟಿನೆಂಟ್ ಗವರ್ನರ್ ಸೂಚನೆ, ಹಿಂದಿನ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಅವರನ್ನು ಪದಚ್ಯುತಿಗೊಳಿಸಿದ್ದು... ಈ ಎಲ್ಲ ನಾಟಕೀಯ ಬೆಳವಣಿಗೆಗಳ ಹಿಂದೆ ಯಾರಿದ್ದಾರೆ ಎಂಬುದು ಪ್ರಜ್ಞಾವಂತ ನಾಗರಿಕರಿಗೆ ತಿಳಿಯದ ವಿಷಯವೇನಲ್ಲ.