ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿ.ವಿ. ಆಡಳಿತ ಹುದ್ದೆ: ಅಧಿಕಾರಿಗಳು ನೇಮಕಗೊಳ್ಳಲಿ

Last Updated 28 ಜನವರಿ 2020, 15:30 IST
ಅಕ್ಷರ ಗಾತ್ರ

ರಾಜ್ಯದ ವಿಶ್ವವಿದ್ಯಾಲಯಗಳ ಕುಲಸಚಿವರ ಹುದ್ದೆಗೆ ಕೆಎಎಸ್ ಅಧಿಕಾರಿಗಳನ್ನು ನೇಮಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿರುವುದು ಒಳ್ಳೆಯ ಬೆಳವಣಿಗೆ‌. ರಾಜ್ಯದ ಅನೇಕ ವಿಶ್ವವಿದ್ಯಾಲಯಗಳು ಒಂದಿಲ್ಲೊಂದು ಹಗರಣದಲ್ಲಿ ಸಿಲುಕಿವೆ. ವಿಶ್ವವಿದ್ಯಾಲಯಗಳ ಕುಲಪತಿಗಳ ನೇಮಕಾತಿಯೇ ಪ್ರಶ್ನಾರ್ಹವಾಗಿದೆ. ಇನ್ನು ಕುಲಸಚಿವರ ನೇಮಕಾತಿಯಂತೂ ಜಾತಿ ಮತ್ತು ಹಣದ ಪ್ರಭಾವದಿಂದಲೇ ನಿರ್ಧಾರವಾಗುವ ಸ್ಥಿತಿ ಕಂಡುಬರುತ್ತಿದೆ.

ವಿಶ್ವವಿದ್ಯಾಲಯಗಳಲ್ಲಿ ನೇಮಕಾತಿ ಹಗರಣ, ಆಡಳಿತದಲ್ಲಿ ಭ್ರಷ್ಟಾಚಾರ, ಜಾತೀಯತೆ ತಾಂಡವವಾಡುತ್ತಿದೆ. ಕೆಲ ಪ್ರಾಧ್ಯಾಪಕರು ಆಡಳಿತ ಹುದ್ದೆಗಳಲ್ಲಿಯೇಕಾಲಕಳೆಯುತ್ತಿದ್ದಾರೆ. ಇಂತಹವುಗಳಿಗೆಲ್ಲ ಕಡಿವಾಣ ಹಾಕಬೇಕಾದರೆ ಉನ್ನತ ಆಡಳಿತಾತ್ಮಕ ಹುದ್ದೆಗಳಿಗೆ ಅಧಿಕಾರಿಗಳು ಬರಲೇಬೇಕಿದೆ.

– ತಿಮ್ಮೇಶ್ ಮುಸ್ಟೂರು,ಹಂಪಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT