ಮಾನವ ಸಮಾಜ ‘ಸಾಮಾಜಿಕ ಒಪ್ಪಂದ’ದ ಅನ್ವಯ ಒಂದು ವ್ಯವಸ್ಥೆಯನ್ನು ರೂಪಿಸಿಕೊಂಡಿದೆ. ಒಂದೋ, ಜನರಿಗೆ ಈ ರೀತಿಯ ವ್ಯವಸ್ಥೆ ಇದೆಎಂಬ ಅರಿವಿಲ್ಲ. ಇಲ್ಲವೇ, ಈ ವ್ಯವಸ್ಥೆಯ ಮೇಲೆ ಅವರು ನಂಬಿಕೆ ಕಳೆದುಕೊಂಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲು ಒಂದು ವ್ಯವಸ್ಥಿತ ಕ್ರಮ ಇದೆ. ಇದಕ್ಕೆಂದೇ ಪೊಲೀಸ್, ಕೋರ್ಟ್, ಕಾಯ್ದೆ ಇರುವುದು. ಕಾನೂನನ್ನು ಕೈಗೆ ತೆಗೆದುಕೊಳ್ಳಲು ಯಾವುದೇ ವ್ಯಕ್ತಿಗೆ ಅಧಿಕಾರ ಇಲ್ಲ. ಈ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸುವುದು, ಕಾನೂನಿನ ಬಗ್ಗೆ ಅರಿವು ಮೂಡಿಸುವುದು ಇಂದಿನ ತುರ್ತು. ಈ ಮೂಲಕ, ವ್ಯವಸ್ಥೆ ಮೇಲೆ ಜನರ ನಂಬಿಕೆಯನ್ನು ಹೆಚ್ಚಿಸಬೇಕಾಗಿದೆ.