<p>ಗ್ರಂಥಾಲಯ ಕುರಿತಂತೆ ಡಾ. ಕೆ.ಎಸ್.ಪವಿತ್ರ ಅವರ ಲೇಖನ (ಸಂಗತ, ನ. 15) ಯೋಚನೆಗೆ ಹಚ್ಚುವಂತಿದೆ. ಗ್ರಂಥಾಲಯಗಳಿಗೆ ಹೋಗುವವರ ಸಂಖ್ಯೆ ಕ್ಷೀಣಿಸುತ್ತಿದ್ದು ಇದನ್ನು ಸರಿಪಡಿಸಲು ಮಕ್ಕಳಿರುವಾಗಲೇ ಓದುವ ಅಭ್ಯಾಸವನ್ನು ರೂಢಿಸಬೇಕು. ಆದರೆ ಈಗಿನ ಮಕ್ಕಳಲ್ಲಿ ಪಠ್ಯಪುಸ್ತಕದ ವಿಷಯ ಹೊರತುಪಡಿಸಿ ಹೊರಗಿನ ಜ್ಞಾನ ತೀರಾ ಕಮ್ಮಿ. ಪಠ್ಯಪುಸ್ತಕಗಳಿಗೆ ಹೊರತಾದ ಪುಸ್ತಕಗಳನ್ನು ಓದುವ ರೂಢಿಯನ್ನು ಮಕ್ಕಳಲ್ಲಿ ಬೆಳೆಸಬೇಕು. ಒಬ್ಬ ವ್ಯಕ್ತಿಯ ವ್ಯಕ್ತಿತ್ವದ ಬೆಳವಣಿಗೆಯಲ್ಲಿ, ಯೋಚನಾ ಸಾಮರ್ಥ್ಯದಲ್ಲಿ ಪುಸ್ತಕಗಳು ಪ್ರಮುಖ ಪಾತ್ರ ವಹಿಸುತ್ತವೆ. ಮಕ್ಕಳು ಪುಸ್ತಕಗಳಿಗಿಂತ ಮೊಬೈಲ್ಗಳಲ್ಲೇ ಹೆಚ್ಚು ಸಮಯ ಕಳೆಯುತ್ತಿದ್ದಾರೆ. ಪೋಷಕರು ಪುಟ್ಟ ಮಕ್ಕಳಿಗೆ ಊಟ ಮಾಡಿಸುವಾಗ, ಅವು ಅಳುವಾಗ, ಹಟ ಹಿಡಿದಾಗ ಮೊಬೈಲ್ ಕೊಡುವ ಅಭ್ಯಾಸ ಮಾಡಿರುತ್ತಾರೆ. ಇದು ಮಕ್ಕಳ ಮಾನಸಿಕ ಮತ್ತು ದೈಹಿಕ ಬೆಳವಣಿಗೆ ಮೇಲೆ ಪರಿಣಾಮ ಬೀರುತ್ತದೆ ಹಾಗೂ ಅವರಲ್ಲಿ ಯೋಚನಾಶಕ್ತಿ ಕುಂದುವಂತೆ ಮಾಡುತ್ತದೆ.</p>.<p>ಮಕ್ಕಳು ಪೋಷಕರ ಮಾತು ಕೇಳುವುದು ವಿರಳ. ಆದರೆ ಅವರನ್ನು ಅನುಸರಿಸುತ್ತಾರೆ. ಪೋಷಕರು ಮೊಬೈಲ್ ಹಿಡಿದು ಕುಳಿತರೆ ಮಕ್ಕಳೂ ಅದೇ ಕೆಲಸ ಮಾಡುತ್ತಾರೆ. ಅದೇ ಪೋಷಕರು ಪುಸ್ತಕ ಹಿಡಿದು ಕುಳಿತರೆ ಮಕ್ಕಳೂ ಅದನ್ನು ಅನುಸರಿಸುತ್ತಾರೆ. ‘ಪುಸ್ತಕದಿಂದ ದೊರೆತರಿವು ಮಸ್ತಕದಿ ತಳೆದ ಮಣಿ’ ಎಂಬ ಡಿವಿಜಿ ಅವರ ಮಾತುಗಳನ್ನು ಮೊದಲು ಪೋಷಕರು ಅರಿಯಬೇಕಿದೆ.</p>.<p><strong>-ಬಿ.ಎಸ್.ಚೈತ್ರ,ಚಿತ್ರದುರ್ಗ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗ್ರಂಥಾಲಯ ಕುರಿತಂತೆ ಡಾ. ಕೆ.ಎಸ್.ಪವಿತ್ರ ಅವರ ಲೇಖನ (ಸಂಗತ, ನ. 15) ಯೋಚನೆಗೆ ಹಚ್ಚುವಂತಿದೆ. ಗ್ರಂಥಾಲಯಗಳಿಗೆ ಹೋಗುವವರ ಸಂಖ್ಯೆ ಕ್ಷೀಣಿಸುತ್ತಿದ್ದು ಇದನ್ನು ಸರಿಪಡಿಸಲು ಮಕ್ಕಳಿರುವಾಗಲೇ ಓದುವ ಅಭ್ಯಾಸವನ್ನು ರೂಢಿಸಬೇಕು. ಆದರೆ ಈಗಿನ ಮಕ್ಕಳಲ್ಲಿ ಪಠ್ಯಪುಸ್ತಕದ ವಿಷಯ ಹೊರತುಪಡಿಸಿ ಹೊರಗಿನ ಜ್ಞಾನ ತೀರಾ ಕಮ್ಮಿ. ಪಠ್ಯಪುಸ್ತಕಗಳಿಗೆ ಹೊರತಾದ ಪುಸ್ತಕಗಳನ್ನು ಓದುವ ರೂಢಿಯನ್ನು ಮಕ್ಕಳಲ್ಲಿ ಬೆಳೆಸಬೇಕು. ಒಬ್ಬ ವ್ಯಕ್ತಿಯ ವ್ಯಕ್ತಿತ್ವದ ಬೆಳವಣಿಗೆಯಲ್ಲಿ, ಯೋಚನಾ ಸಾಮರ್ಥ್ಯದಲ್ಲಿ ಪುಸ್ತಕಗಳು ಪ್ರಮುಖ ಪಾತ್ರ ವಹಿಸುತ್ತವೆ. ಮಕ್ಕಳು ಪುಸ್ತಕಗಳಿಗಿಂತ ಮೊಬೈಲ್ಗಳಲ್ಲೇ ಹೆಚ್ಚು ಸಮಯ ಕಳೆಯುತ್ತಿದ್ದಾರೆ. ಪೋಷಕರು ಪುಟ್ಟ ಮಕ್ಕಳಿಗೆ ಊಟ ಮಾಡಿಸುವಾಗ, ಅವು ಅಳುವಾಗ, ಹಟ ಹಿಡಿದಾಗ ಮೊಬೈಲ್ ಕೊಡುವ ಅಭ್ಯಾಸ ಮಾಡಿರುತ್ತಾರೆ. ಇದು ಮಕ್ಕಳ ಮಾನಸಿಕ ಮತ್ತು ದೈಹಿಕ ಬೆಳವಣಿಗೆ ಮೇಲೆ ಪರಿಣಾಮ ಬೀರುತ್ತದೆ ಹಾಗೂ ಅವರಲ್ಲಿ ಯೋಚನಾಶಕ್ತಿ ಕುಂದುವಂತೆ ಮಾಡುತ್ತದೆ.</p>.<p>ಮಕ್ಕಳು ಪೋಷಕರ ಮಾತು ಕೇಳುವುದು ವಿರಳ. ಆದರೆ ಅವರನ್ನು ಅನುಸರಿಸುತ್ತಾರೆ. ಪೋಷಕರು ಮೊಬೈಲ್ ಹಿಡಿದು ಕುಳಿತರೆ ಮಕ್ಕಳೂ ಅದೇ ಕೆಲಸ ಮಾಡುತ್ತಾರೆ. ಅದೇ ಪೋಷಕರು ಪುಸ್ತಕ ಹಿಡಿದು ಕುಳಿತರೆ ಮಕ್ಕಳೂ ಅದನ್ನು ಅನುಸರಿಸುತ್ತಾರೆ. ‘ಪುಸ್ತಕದಿಂದ ದೊರೆತರಿವು ಮಸ್ತಕದಿ ತಳೆದ ಮಣಿ’ ಎಂಬ ಡಿವಿಜಿ ಅವರ ಮಾತುಗಳನ್ನು ಮೊದಲು ಪೋಷಕರು ಅರಿಯಬೇಕಿದೆ.</p>.<p><strong>-ಬಿ.ಎಸ್.ಚೈತ್ರ,ಚಿತ್ರದುರ್ಗ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>