ಶಿವಮೊಗ್ಗ ಜಿಲ್ಲೆಯ ನರಸೀಪುರ ಗ್ರಾಮದಲ್ಲಿ ಕ್ಯಾನ್ಸರ್ನಂತಹ ಗಂಭೀರ ಕಾಯಿಲೆಗಳಿಗೆ ನಾಟಿ ಔಷಧ ನೀಡುತ್ತಿದ್ದ ನಾರಾಯಣಮೂರ್ತಿ ಅವರು ನಿಧನರಾಗಿರುವುದರಿಂದ, ಅವರ ಮಕ್ಕಳು ಈ ಔಷಧ ನೀಡುವುದನ್ನು ಮುಂದುವರಿಸಿದ್ದಾರೆ. ಆದರೆ ಇದಕ್ಕೆ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿರುವುದಾಗಿ ವರದಿಯಾಗಿದೆ (ಪ್ರ.ವಾ., ಸೆ. 17). ತಮ್ಮ ಗ್ರಾಮದಲ್ಲೇ ಅನೇಕರು ಕ್ಯಾನ್ಸರ್ನಿಂದ ಮರಣ ಹೊಂದಿದ್ದಾರೆ ಮತ್ತು ಈ ನಾಟಿ ಔಷಧಕ್ಕೆ ಕಾಯಿಲೆಗಳನ್ನು ವಾಸಿ ಮಾಡುವ ಯಾವ ಶಕ್ತಿಯೂ ಇಲ್ಲ ಎಂದು ಗ್ರಾಮಸ್ಥರು ಸಂಧಾನ ಸಭೆಯಲ್ಲಿ ಹೇಳಿದ್ದಾರೆ.