ಅಂತಿಮ ವರ್ಷದ ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯುತ್ತಿದೆ. ಕೊರೊನಾ ಕಾರಣದಿಂದ ಪರೀಕ್ಷೆಗಳು ಮುಂದೂಡಲ್ಪಟ್ಟಿದ್ದರಿಂದ ಈಗಾಗಲೇ ಮಹತ್ವದ ಸಮಯ ವ್ಯರ್ಥವಾಗಿದೆ. ಈ ನಡುವೆ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇತ್ತೀಚೆಗೆ ಹೊರಡಿಸಿರುವ ಸುಗ್ರೀವಾಜ್ಞೆ ಹಾಗೂ ಕಾಯ್ದೆಗಳನ್ನು ವಾಪಸ್ ಪಡೆಯಬೇಕೆಂದು ಒತ್ತಾಯಿಸಿ ರೈತ, ದಲಿತ, ಕಾರ್ಮಿಕರ ಐಕ್ಯ ಹೋರಾಟ ಸಮಿತಿ ಇದೇ 28ರಂದು ರಾಜ್ಯ ಬಂದ್ಗೆ ಕರೆ ನೀಡಿದೆ. ಈ ಕಾರಣದಿಂದ ಪರೀಕ್ಷೆಗಳು ಮತ್ತೆ ಮುಂದಕ್ಕೆ ಹೋದರೆ, ವಿದ್ಯಾರ್ಥಿಗಳ ಮುಂದಿನ ವಿದ್ಯಾಭ್ಯಾಸ ಮತ್ತು ಉದ್ಯೋಗಕ್ಕೆ ತೊಡಕಾಗುತ್ತದೆ. ಬಂದ್ ನಡೆಸುವವರು ಪರೀಕ್ಷೆಗೆ ತೊಂದರೆಯಾಗದಂತೆ ಎಚ್ಚರ ವಹಿಸಬೇಕು.