ವೃತ್ತಿ ತರಬೇತಿ ಮತ್ತು ಕೌಶಲಾಭಿವೃದ್ಧಿ ನಿಗಮದ ಅಧ್ಯಕ್ಷೆ ಯಾಗಿ ಕಾರ್ಯನಿರ್ವಹಿಸಿದ ಪುಷ್ಪಾ, ತೆರೆಮರೆಯಲ್ಲಿ ಹೈಕಮಾಂಡ್ ಗಮನ ಸೆಳೆದಿದ್ದು, ಭಾರಿ ಚರ್ಚೆಗೆ ಕಾರಣವಾಗಿದೆ. ಜಿಲ್ಲೆಯ ರಾಜಕೀಯ ವಲಯದಲ್ಲಿ ಅಷ್ಟೇನೂ ಖ್ಯಾತನಾಮರಲ್ಲದ ಪುಷ್ಪಾ ಲಕ್ಷ್ಮಣಸ್ವಾಮಿ ಇದೇ ಮೊದಲ ಬಾರಿ ಕಾಂಗ್ರೆಸ್ ಟಿಕೆಟ್ಗೆ ಅರ್ಜಿ ಸಲ್ಲಿಸಿದ್ದರು. ಇಂಗ್ಲಿಷ್ ಸಾಹಿತ್ಯದಲ್ಲಿ ಎಂ.ಎ ಸ್ನಾತಕೋತ್ತರ ಪದವೀಧರರಾಗಿದ್ದು, ಉಪನ್ಯಾಸಕಿ →ಆಗಿರುವ ಪುಷ್ಪಾ ಕೇವಲ 10 ವರ್ಷಗಳ ಹಿಂದಷ್ಟೇ →ರಾಜಕೀಯ ಕ್ಷೆತ್ರಕ್ಕೆ ಕಾಲಿಟ್ಟಿದ್ದರು.