ಇದೇ ರೀತಿ, ಕೇಂದ್ರದ ಉದ್ಯೋಗದಲ್ಲಿ ಸ್ಥಳೀಯರಿಗೆ ಮೀಸಲಾತಿ ಸಿಗಬೇಕು ಎಂಬ ಬಹುದಿನಗಳ ಕನಸು ಸಹ ನನಸಾಗಬೇಕಿದೆ. ಕರ್ನಾಟಕದಲ್ಲಿ ಬ್ಯಾಂಕಿಂಗ್ ಮತ್ತು ರೈಲ್ವೆಯಲ್ಲಿ ಸ್ಥಳೀಯರಿಗೆ ಹೆಚ್ಚಾಗಿ ಅವಕಾಶಗಳು ಸಿಗುತ್ತಿಲ್ಲ. ಇದರ ಪರಿಣಾಮವಾಗಿ ಸ್ಥಳೀಯರು ಉದ್ಯೋಗದಿಂದ ವಂಚಿತರಾಗುತ್ತಿದ್ದಾರೆ. ಅಲ್ಲದೆ, ಪರ ರಾಜ್ಯಗಳಿಂದ ಬಂದ ಉದ್ಯೋಗಿಗಳಿಗೆ ಸ್ಥಳೀಯ ಭಾಷೆ ಬಾರದ ಕಾರಣ ಗ್ರಾಹಕರ ಜೊತೆ ವ್ಯವಹರಿಸುವಾಗ ತೊಡಕಾಗುತ್ತದೆ.