2014ಕ್ಕೆ ಮೊದಲಿದ್ದ ಐಬಿಪಿಎಸ್ ಕಟ್ಟಲೆಗಳನ್ನು ಜಾರಿಗೆ ತರುವುದೇ ಇದಕ್ಕಿರುವ ಪರಿಹಾರ. ಇದರ ಜೊತೆಗೆ ಡಾ. ಸರೋಜಿನಿ ಮಹಿಷಿ ವರದಿ ಜಾರಿಗೆ ತಂದು, ಕರ್ನಾಟಕದಲ್ಲಿನ ಕೆಲಸಗಳು ಕನ್ನಡಿಗರಿಗೆ ದೊರೆಯುವಂತೆ ಮಾಡಬೇಕು. ಇವುಗಳ ಜೊತೆಗೆ ಇಡಬೇಕಾದ ಇನ್ನೊಂದು ಹೆಜ್ಜೆ ಎಂದರೆ, ಬ್ಯಾಂಕಿಂಗ್ ವಲಯವನ್ನು ರಾಜ್ಯಗಳ ತೆಕ್ಕೆಗೆ ತರುವುದು. ಒಟ್ಟಿನಲ್ಲಿ, ಕರ್ನಾಟಕದಲ್ಲಿನ ಬ್ಯಾಂಕುಗಳ ಎಲ್ಲ ಸೇವೆ, ತಿಳಿವು ಕನ್ನಡದಲ್ಲಿ ದೊರೆಯುವಂತೆ ಆಗಬೇಕು.