ಬೆಂಗಳೂರಿನ ನಾಗವಾರದಲ್ಲಿ ಬಿಡಿಎಗೆ ಸೇರಿದ ಸುಮಾರು ನೂರು ಕೋಟಿ ರೂಪಾಯಿ ಮೌಲ್ಯದ ಒಂದೂಕಾಲು ಎಕರೆ ಜಾಗದಲ್ಲಿ ನಿರ್ಮಿಸಲಾಗಿದ್ದ ವಾಣಿಜ್ಯ ಮಳಿಗೆಗಳನ್ನು ಇತ್ತೀಚೆಗೆ ತೆರವುಗೊಳಿಸಿದ ಸುದ್ದಿ ಪತ್ರಿಕೆಗಳಲ್ಲಿ ಪ್ರಕಟವಾಗಿದೆ. ಈ ಪ್ರಕ್ರಿಯೆಗೆ ಮೂರು ದಶಕಗಳಿಗಿಂತಲೂ ಅಧಿಕ ಸಮಯ ತಗುಲಿರುವುದು ಅಚ್ಚರಿ ಮೂಡಿಸುತ್ತದೆ. ನಗರದ ವಿವಿಧ ಬಡಾವಣೆಗಳಲ್ಲಿ ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಭೂಮಿಯನ್ನು ಒತ್ತುವರಿ ಮಾಡಿಕೊಂಡಿರುವುದು ಗೋಪ್ಯವಾಗಿ ಉಳಿದಿಲ್ಲ.