<p>ಕೇಂದ್ರ ಸಚಿವ ಸುರೇಶ್ ಅಂಗಡಿಯವರು ಕೋವಿಡ್ನಿಂದಾಗಿ ನಿಧನರಾಗಿದ್ದು ಆತಂಕಕಾರಿ ಸಂಗತಿ. ಕೇಂದ್ರ ಸಚಿವರಾಗಿದ್ದೂ ದೇಶದ ಪ್ರತಿಷ್ಠಿತ ‘ಏಮ್ಸ್’ ಆಸ್ಪತ್ರೆಯಲ್ಲಿ ದಾಖಲಾಗಿದ್ದರೂ ಅವರು ಗುಣಮುಖರಾಗಲಿಲ್ಲ. ಈ ವಿಚಾರವನ್ನು ಜನಸಾಮಾನ್ಯರು ಗಂಭೀರವಾಗಿ ಪರಿಗಣಿಸಬೇಕು. ಜನರಲ್ಲಿ ಇತ್ತೀಚೆಗೆ ಕೊರೊನಾ ವೈರಾಣು ಬಗ್ಗೆ ಭಯ ಇಲ್ಲದಂತಾಗಿದೆ. ಎಲ್ಲಾ ಕಡೆ ನಿರ್ಭೀತಿಯಿಂದ ಓಡಾಡುವ ದೃಶ್ಯ ಕಾಣಸಿಗುತ್ತದೆ. ಸುರಕ್ಷತಾ ಕ್ರಮಗಳನ್ನು ಅನುಸರಿಸುತ್ತಿಲ್ಲ. ಸರ್ಕಾರ ಕೂಡಾ ಈ ವಿಚಾರದಲ್ಲಿ ಕೈ ಚೆಲ್ಲಿದಂತೆ ಕಾಣುತ್ತಿದೆ. ಇಂತಹ ಅಸಡ್ಡೆ ಒಳ್ಳೆಯದಲ್ಲ. ಮಾಸ್ಕ್ ಧರಿಸುವುದು, ಅಂತರ ಕಾಪಾಡಿಕೊಳ್ಳುವುದು ಅಗತ್ಯ ಎಂಬುದನ್ನು ಅರಿಯಬೇಕು. ಸೋಂಕಿಗೆ ಒಳಗಾಗದಂತೆ ಎಚ್ಚರ ವಹಿಸುವುದೇ ಜಾಣ ನಡೆ ಎಂಬುದನ್ನು ಸರ್ಕಾರ ಪದೇ ಪದೇ ಮನದಟ್ಟು ಮಾಡಿಸುತ್ತಲೇ ಇರಬೇಕು.</p>.<p><em><strong>–ವಿ.ತಿಪ್ಪೇಸ್ವಾಮಿ, ಹಿರಿಯೂರು</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೇಂದ್ರ ಸಚಿವ ಸುರೇಶ್ ಅಂಗಡಿಯವರು ಕೋವಿಡ್ನಿಂದಾಗಿ ನಿಧನರಾಗಿದ್ದು ಆತಂಕಕಾರಿ ಸಂಗತಿ. ಕೇಂದ್ರ ಸಚಿವರಾಗಿದ್ದೂ ದೇಶದ ಪ್ರತಿಷ್ಠಿತ ‘ಏಮ್ಸ್’ ಆಸ್ಪತ್ರೆಯಲ್ಲಿ ದಾಖಲಾಗಿದ್ದರೂ ಅವರು ಗುಣಮುಖರಾಗಲಿಲ್ಲ. ಈ ವಿಚಾರವನ್ನು ಜನಸಾಮಾನ್ಯರು ಗಂಭೀರವಾಗಿ ಪರಿಗಣಿಸಬೇಕು. ಜನರಲ್ಲಿ ಇತ್ತೀಚೆಗೆ ಕೊರೊನಾ ವೈರಾಣು ಬಗ್ಗೆ ಭಯ ಇಲ್ಲದಂತಾಗಿದೆ. ಎಲ್ಲಾ ಕಡೆ ನಿರ್ಭೀತಿಯಿಂದ ಓಡಾಡುವ ದೃಶ್ಯ ಕಾಣಸಿಗುತ್ತದೆ. ಸುರಕ್ಷತಾ ಕ್ರಮಗಳನ್ನು ಅನುಸರಿಸುತ್ತಿಲ್ಲ. ಸರ್ಕಾರ ಕೂಡಾ ಈ ವಿಚಾರದಲ್ಲಿ ಕೈ ಚೆಲ್ಲಿದಂತೆ ಕಾಣುತ್ತಿದೆ. ಇಂತಹ ಅಸಡ್ಡೆ ಒಳ್ಳೆಯದಲ್ಲ. ಮಾಸ್ಕ್ ಧರಿಸುವುದು, ಅಂತರ ಕಾಪಾಡಿಕೊಳ್ಳುವುದು ಅಗತ್ಯ ಎಂಬುದನ್ನು ಅರಿಯಬೇಕು. ಸೋಂಕಿಗೆ ಒಳಗಾಗದಂತೆ ಎಚ್ಚರ ವಹಿಸುವುದೇ ಜಾಣ ನಡೆ ಎಂಬುದನ್ನು ಸರ್ಕಾರ ಪದೇ ಪದೇ ಮನದಟ್ಟು ಮಾಡಿಸುತ್ತಲೇ ಇರಬೇಕು.</p>.<p><em><strong>–ವಿ.ತಿಪ್ಪೇಸ್ವಾಮಿ, ಹಿರಿಯೂರು</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>