ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಎಂಇಎಸ್ ಹಾಗೂ ಶಿವಸೇನಾ ಬೆಂಬಲಿತ ಅಭ್ಯರ್ಥಿ ಶುಭಂ ಸೆಳಕೆ ಅವರು ಮರಾಠಿ ಭಾಷಿಕರು ಹೆಚ್ಚಾಗಿರುವ ಪ್ರದೇಶಗಳಲ್ಲಿ ಪ್ರಚೋದನಕಾರಿ ಭಾಷಣ ಮಾಡುವ ಮೂಲಕ ಜನರಿಂದ ವೋಟು ಕೇಳಿ ನೋಟು ಪಡೆಯುತ್ತಿರುವ ನಡವಳಿಕೆ (ಪ್ರ.ವಾ, ಏ. 6) ಒಪ್ಪುವಂಥದ್ದಲ್ಲ. ಚುನಾವಣಾ ವೆಚ್ಚಕ್ಕೆ ಬಹಿರಂಗವಾಗಿ ದೇಣಿಗೆ ಸಂಗ್ರಹಿಸುವುದಕ್ಕೆ ಅವಕಾಶ ಇರಬಹುದು. ಆದರೆ ಪ್ರಚೋದನಕಾರಿ ಭಾಷಣ ಮಾಡಿ ಹಣ ಸಂಗ್ರಹಿಸುವುದು ಸರಿಯೇ?