ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿನೂತನ ಚುನಾವಣಾ ತಂತ್ರ: ಎಚ್ಚರವಿರಲಿ

Last Updated 9 ಏಪ್ರಿಲ್ 2021, 19:31 IST
ಅಕ್ಷರ ಗಾತ್ರ

ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಎಂಇಎಸ್ ಹಾಗೂ ಶಿವಸೇನಾ ಬೆಂಬಲಿತ ಅಭ್ಯರ್ಥಿ ಶುಭಂ ಸೆಳಕೆ ಅವರು ಮರಾಠಿ ಭಾಷಿಕರು ಹೆಚ್ಚಾಗಿರುವ ಪ್ರದೇಶಗಳಲ್ಲಿ ಪ್ರಚೋದನಕಾರಿ ಭಾಷಣ ಮಾಡುವ ಮೂಲಕ ಜನರಿಂದ ವೋಟು ಕೇಳಿ ನೋಟು ಪಡೆಯುತ್ತಿರುವ ನಡವಳಿಕೆ (ಪ್ರ.ವಾ, ಏ. 6) ಒಪ್ಪುವಂಥದ್ದಲ್ಲ. ಚುನಾವಣಾ ವೆಚ್ಚಕ್ಕೆ ಬಹಿರಂಗವಾಗಿ ದೇಣಿಗೆ ಸಂಗ್ರಹಿಸುವುದಕ್ಕೆ ಅವಕಾಶ ಇರಬಹುದು. ಆದರೆ ಪ್ರಚೋದನಕಾರಿ ಭಾಷಣ ಮಾಡಿ ಹಣ ಸಂಗ್ರಹಿಸುವುದು ಸರಿಯೇ?

ಅಭ್ಯರ್ಥಿಗಳು ಇಂತಿಷ್ಟೇ ಹಣ ಖರ್ಚು ಮಾಡಬೇಕು ಎಂಬ ನಿಯಮವಿದೆ. ಅಭ್ಯರ್ಥಿಗಳು ಇದಕ್ಕೆ ಬದ್ಧರಾಗಿ ಖರ್ಚು ಮಾಡಬೇಕಾಗುತ್ತದೆ. ಜನರಿಗೆ ನೋಟು ಕೊಟ್ಟು ವೋಟು ಪಡೆಯುವಂಥ ಕೆಟ್ಟ ನಡವಳಿಕೆ ಇತ್ತೀಚೆಗೆ ಉಲ್ಬಣಗೊಳ್ಳುತ್ತಿದೆ. ಹೀಗಿರುವಾಗ ಅಭ್ಯರ್ಥಿಗಳು ವಿನೂತನ ತಂತ್ರಗಳನ್ನು ಬಳಸುವುದರ ಬಗ್ಗೆಯೂ ಜನ ಎಚ್ಚರ ವಹಿಸುವುದು ಒಳ್ಳೆಯದು.

-ಡಾ. ಜಿ.ಬೈರೇಗೌಡ, ಬೆಂಗಳೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT