‘ಅರ್ಜಿ ಸಲ್ಲಿಸಿದ ಒಂದು ದಿನದಲ್ಲೇ ಭೂ ಪರಿವರ್ತನೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ, ಆದೇಶ ಹೊರಡಿಸಲು ಅವಕಾಶ ಕಲ್ಪಿಸುವ ಯೋಜನೆಯನ್ನು ಜಾರಿಗೊಳಿಸಲಾಗುವುದು’ ಎಂದು ಕಂದಾಯ ಸಚಿವರು ಹೇಳಿರುವುದು (ಪ್ರ.ವಾ., ಡಿ. 9) ಸಂತೋಷದ ಸಂಗತಿ. ಆದರೆ ಸರ್ಕಾರ ಈ ಯೋಜನೆಯನ್ನು ಆತುರಾತುರವಾಗಿ ಜಾರಿಗೆ ತರದೆ, ಅದನ್ನು ಪರಿಶೀಲಿಸಿ, ತಜ್ಞರಿಂದ ಸಲಹೆ ಪಡೆಯುವುದು ಸೂಕ್ತ.