ಈ ವರ್ಷವಾದರೂ ಸುವರ್ಣಸೌಧದಲ್ಲಿ ಅಧಿವೇಶನ ನಡೆಸಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚಿಸಿ, ಪರಿಹಾರ ಒದಗಿಸುವ ಕೆಲಸ ಮಾಡಬೇಕಾಗಿದೆ. ವಿಶೇಷವಾಗಿ, ಬೆಳಗಾವಿ ಗಡಿ ಜಿಲ್ಲೆಯಾಗಿರುವುದರಿಂದ ಮಹಾರಾಷ್ಟ್ರ ಪದೇಪದೇ ಕ್ಯಾತೆ ತೆಗೆಯುತ್ತಿದೆ. ಹೀಗಾಗಿ ಕನ್ನಡಿಗರ ಒಗ್ಗಟ್ಟಿನ ಶಕ್ತಿ ಪ್ರದರ್ಶನದ ದೃಷ್ಟಿಯಿಂದಲೂ ಬೆಳಗಾವಿಯಲ್ಲಿ ಅಧಿವೇಶನ ನಡೆಸುವುದು ಸೂಕ್ತ.