<p>ಬೆಂಗಳೂರು- ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿಗಾಗಿ ರಾಜ್ಯದ 20 ಸಾವಿರ ಮರಗಳಿಗೆ ಆಪತ್ತು ಎಂಬ ಸುದ್ದಿ ಓದಿ (ಪ್ರ.ವಾ., ನ. 11) ದಿಗ್ಭ್ರಮೆ ಆಯಿತು. ಇನ್ನು ನೆರೆ ರಾಜ್ಯಗಳಲ್ಲಿ ಎಷ್ಟು ಮರಗಳು ಬಲಿಯಾಗಬೇಕೋ ಏನೋ.</p>.<p>ವಾಹನ ಸಂಚಾರಕ್ಕೆ, ಕೈಗಾರಿಕೆಗಳಿಗೆ, ಗೋದಾಮುಗಳಿಗೆ, ಕಟ್ಟಡಗಳಿಗೆ ಎಂದು ವಿವಿಧೋದ್ದೇಶಗಳಿಗೆ ಕೃಷಿಭೂಮಿ ಅಥವಾ ಅರಣ್ಯದ ಹಸಿರನ್ನು ಹಾಳುಗೆಡವುತ್ತಾ ಸಾಗಿದರೆ ಮುಂದೆ ಭೂಮಿಯ ಗತಿ ಏನು? ಈಗಾಗಲೇ ಕೃಷಿಯಿಂದ ವಿಮುಖರಾಗಿ ನಗರಕ್ಕೆ ವಲಸೆ ಬರುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಅಂತಹವರನ್ನು ಗುರುತಿಸಿ ಹೆಚ್ಚಿನ ಅನುಕೂಲ ಮಾಡಿಕೊಟ್ಟು ಕೃಷಿಯಲ್ಲಿ ತೊಡಗಿಕೊಳ್ಳುವಂತೆ ಪ್ರೇರೇಪಿಸಬೇಕಾದ ಸರ್ಕಾರವೇ ಕೃಷಿ ಜಮೀನನ್ನು ವಶಪಡಿಸಿಕೊಳ್ಳುತ್ತಾ ಸಾಗಿದರೆ, ಮುಂದೊಂದು ದಿನ ತುತ್ತು ಅನ್ನಕ್ಕಾಗಿ ಪರದಾಡಬೇಕಾದ ಸ್ಥಿತಿ ಎದುರಾಗುತ್ತದೆ. ಈಗಲೂ ಕಾಲ ಮಿಂಚಿಲ್ಲ. ಸರ್ಕಾರ ಮತ್ತು ಸಮಾಜ ಎಚ್ಚೆತ್ತುಕೊಳ್ಳಲಿ. ಕೇವಲ ಹಣದ ಥೈಲಿ ಹೊಟ್ಟೆ ತುಂಬಿಸದು.</p>.<p><em><strong>-ಪತ್ತಂಗಿ ಎಸ್. ಮುರಳಿ, ಬೆಂಗಳೂರು</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು- ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿಗಾಗಿ ರಾಜ್ಯದ 20 ಸಾವಿರ ಮರಗಳಿಗೆ ಆಪತ್ತು ಎಂಬ ಸುದ್ದಿ ಓದಿ (ಪ್ರ.ವಾ., ನ. 11) ದಿಗ್ಭ್ರಮೆ ಆಯಿತು. ಇನ್ನು ನೆರೆ ರಾಜ್ಯಗಳಲ್ಲಿ ಎಷ್ಟು ಮರಗಳು ಬಲಿಯಾಗಬೇಕೋ ಏನೋ.</p>.<p>ವಾಹನ ಸಂಚಾರಕ್ಕೆ, ಕೈಗಾರಿಕೆಗಳಿಗೆ, ಗೋದಾಮುಗಳಿಗೆ, ಕಟ್ಟಡಗಳಿಗೆ ಎಂದು ವಿವಿಧೋದ್ದೇಶಗಳಿಗೆ ಕೃಷಿಭೂಮಿ ಅಥವಾ ಅರಣ್ಯದ ಹಸಿರನ್ನು ಹಾಳುಗೆಡವುತ್ತಾ ಸಾಗಿದರೆ ಮುಂದೆ ಭೂಮಿಯ ಗತಿ ಏನು? ಈಗಾಗಲೇ ಕೃಷಿಯಿಂದ ವಿಮುಖರಾಗಿ ನಗರಕ್ಕೆ ವಲಸೆ ಬರುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಅಂತಹವರನ್ನು ಗುರುತಿಸಿ ಹೆಚ್ಚಿನ ಅನುಕೂಲ ಮಾಡಿಕೊಟ್ಟು ಕೃಷಿಯಲ್ಲಿ ತೊಡಗಿಕೊಳ್ಳುವಂತೆ ಪ್ರೇರೇಪಿಸಬೇಕಾದ ಸರ್ಕಾರವೇ ಕೃಷಿ ಜಮೀನನ್ನು ವಶಪಡಿಸಿಕೊಳ್ಳುತ್ತಾ ಸಾಗಿದರೆ, ಮುಂದೊಂದು ದಿನ ತುತ್ತು ಅನ್ನಕ್ಕಾಗಿ ಪರದಾಡಬೇಕಾದ ಸ್ಥಿತಿ ಎದುರಾಗುತ್ತದೆ. ಈಗಲೂ ಕಾಲ ಮಿಂಚಿಲ್ಲ. ಸರ್ಕಾರ ಮತ್ತು ಸಮಾಜ ಎಚ್ಚೆತ್ತುಕೊಳ್ಳಲಿ. ಕೇವಲ ಹಣದ ಥೈಲಿ ಹೊಟ್ಟೆ ತುಂಬಿಸದು.</p>.<p><em><strong>-ಪತ್ತಂಗಿ ಎಸ್. ಮುರಳಿ, ಬೆಂಗಳೂರು</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>