ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೈಗೊಂಡಿರುವ ‘ಭಾರತ್ ಜೋಡೊ’ ಯಾತ್ರೆಗೆ ರಾಜ್ಯದಾದ್ಯಂತ ಉತ್ತಮ ಬೆಂಬಲ ಸಿಕ್ಕಿರುವುದು ಆ ಪಕ್ಷಕ್ಕೆ ಸ್ವಲ್ಪಮಟ್ಟಿಗೆ ಸಮಾಧಾನ ತರುವ ವಿಷಯವಾ ಗಬಹುದು. ರಾಹುಲ್ ಹೋದೆಡೆಯೆಲ್ಲಾ ಜನರೊಡನೆ ಬೆರೆತು ಅವರ ಕಷ್ಟ ಸುಖಗಳಿಗೆ ಧ್ವನಿಯಾಗುತ್ತಿದ್ದಾರೆ. ಒಂದು ಗ್ರಾಮದಲ್ಲಿ ಮಳೆ ಬೀಳುತ್ತಿದ್ದರೂ ವಿಚಲಿತರಾಗದೆ ಸಭಿಕರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನವನ್ನು ಅವರು ವಹಿಸಿಕೊಳ್ಳಲು ನಿರಾಕರಿಸುವ ಮೂಲಕ ಒಳ್ಳೆಯ ಕೆಲಸ ಮಾಡಿದ್ದಾರೆ. ರಾಹುಲ್ ಅವರಲ್ಲಿ ಸ್ವಲ್ಪ ಸ್ವಲ್ಪವಾಗಿ ರಾಜಕೀಯ ಪ್ರಬುದ್ಧತೆ ಮತ್ತು ನಾಯಕತ್ವದ ಲಕ್ಷಣಗಳು ಗೋಚರಿಸಲು ಪ್ರಾರಂಭಿಸಿವೆ.