ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅದಕ್ಕೇ ಅಲ್ಲವೆ ಬಿಜೆಪಿಗೆ ಅಧಿಕಾರ ನೀಡಿದ್ದು?!

Last Updated 17 ಏಪ್ರಿಲ್ 2022, 20:15 IST
ಅಕ್ಷರ ಗಾತ್ರ

‘ಭ್ರಷ್ಟಾಚಾರದ ಪರಂಪರೆಯನ್ನು ಪ್ರಾರಂಭಿಸಿದ್ದೇ ಕಾಂಗ್ರೆಸ್’ ಎಂದಿದ್ದಾರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (ಪ್ರ.ವಾ., ಏ. 16). ಸರಿ, ಹಾಗೆಂದು ಆ ಭ್ರಷ್ಟಾಚಾರವು ಬಿಜೆಪಿ ನೇತೃತ್ವದ ಸರ್ಕಾರದಲ್ಲೂ ಮುಂದುವರಿಯಬಾರದಲ್ಲ! ಅಷ್ಟೇ ಅಲ್ಲದೆ ಈಗ ಬಿಜೆಪಿ ನೇತೃತ್ವದ ಸರ್ಕಾರದಲ್ಲೂ ಕೇಳಿಬರುತ್ತಿರುವ ಭ್ರಷ್ಟಾಚಾರಕ್ಕೂ ಇದು ಸಮರ್ಥನೆ ಆಗಬಾರದಲ್ಲ! ಕಾಂಗ್ರೆಸ್ ಹಾಗೆ ದುರಾಡಳಿತ ನೀಡಿದ್ದರಿಂದಲೇ ಅಲ್ಲವೇ ಮತದಾರರು ಆ ಪಕ್ಷವನ್ನು ತಿರಸ್ಕರಿಸಿ ಬಿಜೆಪಿಗೆ ಅಧಿಕಾರ ನೀಡಿದ್ದು? ಭ್ರಷ್ಟಾಚಾರದ ಆಪಾದನೆ ಕೇಳಿಬಂದಾಗ ಮುಖ್ಯಮಂತ್ರಿ ಅದರ ಮೂಲ ಹುಡುಕುತ್ತಾ ಹೋಗಿ ತಮ್ಮ ಹೊಣೆಗಾರಿಕೆಯಿಂದ ನುಣುಚಿಕೊಳ್ಳಬಾರದು. ಒಂದು ವೇಳೆ ಹಾಗೆ ಮಾಡಿದರೆ ಆಗ ಕಾಂಗ್ರೆಸ್‌ಗೂ ಬಿಜೆಪಿಗೂ ವ್ಯತ್ಯಾಸವೆಲ್ಲಿ ಉಳಿಯುತ್ತದೆ?

-ಹುರುಕಡ್ಲಿಶಿವಕುಮಾರ,ಬಾಚಿಗೊಂಡನಹಳ್ಳಿ, ಹಗರಿಬೊಮ್ಮನಹಳ್ಳಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT