ಅದಕ್ಕೇ ಅಲ್ಲವೆ ಬಿಜೆಪಿಗೆ ಅಧಿಕಾರ ನೀಡಿದ್ದು?!
‘ಭ್ರಷ್ಟಾಚಾರದ ಪರಂಪರೆಯನ್ನು ಪ್ರಾರಂಭಿಸಿದ್ದೇ ಕಾಂಗ್ರೆಸ್’ ಎಂದಿದ್ದಾರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (ಪ್ರ.ವಾ., ಏ. 16). ಸರಿ, ಹಾಗೆಂದು ಆ ಭ್ರಷ್ಟಾಚಾರವು ಬಿಜೆಪಿ ನೇತೃತ್ವದ ಸರ್ಕಾರದಲ್ಲೂ ಮುಂದುವರಿಯಬಾರದಲ್ಲ! ಅಷ್ಟೇ ಅಲ್ಲದೆ ಈಗ ಬಿಜೆಪಿ ನೇತೃತ್ವದ ಸರ್ಕಾರದಲ್ಲೂ ಕೇಳಿಬರುತ್ತಿರುವ ಭ್ರಷ್ಟಾಚಾರಕ್ಕೂ ಇದು ಸಮರ್ಥನೆ ಆಗಬಾರದಲ್ಲ! ಕಾಂಗ್ರೆಸ್ ಹಾಗೆ ದುರಾಡಳಿತ ನೀಡಿದ್ದರಿಂದಲೇ ಅಲ್ಲವೇ ಮತದಾರರು ಆ ಪಕ್ಷವನ್ನು ತಿರಸ್ಕರಿಸಿ ಬಿಜೆಪಿಗೆ ಅಧಿಕಾರ ನೀಡಿದ್ದು? ಭ್ರಷ್ಟಾಚಾರದ ಆಪಾದನೆ ಕೇಳಿಬಂದಾಗ ಮುಖ್ಯಮಂತ್ರಿ ಅದರ ಮೂಲ ಹುಡುಕುತ್ತಾ ಹೋಗಿ ತಮ್ಮ ಹೊಣೆಗಾರಿಕೆಯಿಂದ ನುಣುಚಿಕೊಳ್ಳಬಾರದು. ಒಂದು ವೇಳೆ ಹಾಗೆ ಮಾಡಿದರೆ ಆಗ ಕಾಂಗ್ರೆಸ್ಗೂ ಬಿಜೆಪಿಗೂ ವ್ಯತ್ಯಾಸವೆಲ್ಲಿ ಉಳಿಯುತ್ತದೆ?
-ಹುರುಕಡ್ಲಿಶಿವಕುಮಾರ, ಬಾಚಿಗೊಂಡನಹಳ್ಳಿ, ಹಗರಿಬೊಮ್ಮನಹಳ್ಳಿ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.