ಮಹಿಳೆಯರು, ರೈತರು, ಕಾರ್ಮಿಕರು, ದಲಿತರ ಕೂಗಿಗೆ ಕಿವಿಗೊಡಬೇಕು. ಅವರಿಗೆ ಸಾಂತ್ವನ ಹೇಳುವುದರ ಜತೆಗೆ, ಅವರ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಬೇಕು.ತಾವು ಮಾತ್ರ ದೇಶಭಕ್ತರು, ತಮ್ಮನ್ನು ಪ್ರಶ್ನಿಸುವವರೆಲ್ಲ ದೇಶದ್ರೋಹಿಗಳು ಎಂದು ಬಿಂಬಿಸುವ ಪ್ರವೃತ್ತಿಯನ್ನು ಬಿಜೆಪಿಯವರು ಮೊದಲು ಬಿಡಬೇಕು. ಸರ್ಕಾರದ ಕಾರ್ಯಕ್ರಮಗಳ ಪ್ರಗತಿಗೆ ಸಂಬಂಧಿಸಿದ ಮಾಹಿತಿಯು ಸಾರ್ವಜನಿಕವಾಗಿ ಲಭ್ಯವಿರಬೇಕು.