ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್.ಯಡಿಯೂರಪ್ಪ ಅವರನ್ನು ಪದಚ್ಯುತಗೊಳಿಸಲು ನಡೆಯುತ್ತಿರುವ ಷಡ್ಯಂತ್ರಗಳನ್ನು ಕೈಬಿಡಬೇಕು ಎಂದು ಆಗ್ರಹಿಸಿ ಕೆಲ ಮಠಾಧೀಶರು ಬಿಜೆಪಿ ವರಿಷ್ಠರಿಗೆ ಎಚ್ಚರಿಕೆಯ ಸಂದೇಶ ನೀಡಿದ್ದಾರೆ. ಇದು ತಮ್ಮದಲ್ಲದ ಕ್ಷೇತ್ರದಲ್ಲಿ ಮೂಗು ತೂರಿಸುವ ಕೆಲಸ. ಸ್ವಾಮೀಜಿ ಅಥವಾ ರಾಜಕೀಯ ಧುರೀಣರನ್ನು ಜಾತಿ–ಮತಗಳ ಮಿತಿಗೆ ಒಳಪಡಿಸದೆ ಒಪ್ಪಿಕೊಳ್ಳುವ ಕಾಲ ಒಂದಿತ್ತು. ಇನ್ನೂ ಸ್ವಲ್ಪಮಟ್ಟಿಗೆ ಉಳಿದಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಅದಕ್ಕೆ ಭಂಗ ತರುವ ಹಾಗೂ ಜನರ ದಾರಿ ತಪ್ಪಿಸುವ ಕೆಲಸ ಈ ಎರಡೂ ವರ್ಗಗಳಿಂದ ನಡೆಯುತ್ತಿದೆ. ಇದು, ಸರಿಯಲ್ಲ.