ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂತ್ರಸ್ತರಿಗೆ ಬದುಕು ಕಟ್ಟಿಕೊಡಿ

Last Updated 22 ಜನವರಿ 2019, 20:15 IST
ಅಕ್ಷರ ಗಾತ್ರ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ ಜೀವಂತವಾಗಿರುವ ದೇವದಾಸಿ ಪದ್ಧತಿ ಕುರಿತ ಬರಹ (ಸಂಗತ, ಜ. 21) ಸರ್ಕಾರದ ಕಣ್ಣು ತೆರೆಸುವಂತಿದೆ.ಕಾನೂನಿನ ಪ್ರಕಾರ ಇದಕ್ಕೆ ನಿಷೇಧವಿದ್ದರೂ, ಸವದತ್ತಿಯಂತಹ ಜಾಗದಲ್ಲಿ ಅಧಿಕಾರಿಗಳು, ಪೊಲೀಸರ ಕಣ್ಣ ಮುಂದೆಯೇ ಹೆಣ್ಣುಮಕ್ಕಳನ್ನು ಬಲವಂತವಾಗಿ ಈ ಅನಿಷ್ಟ ಪದ್ಧತಿಗೆ ದೂಡಲಾಗುತ್ತಿದೆ.‌

ವಯಸ್ಸಾದ ತಾಯಂದಿರ ಗೋಳು, ಹುಟ್ಟಿನಿಂದಲೇ ಶಾಪಗ್ರಸ್ತರಾಗುವ ಮಕ್ಕಳು, ಕಡೆಗಣ್ಣಿನಿಂದಲೂ ಕನಿಕರ ಸೂಚಿಸದ ಸಮಾಜ– ಇವೆಲ್ಲವುಗಳಿಂದ ಬಿಡುಗಡೆ ಹೊಂದುವುದು ತುರ್ತು ಅಗತ್ಯ. ಸರ್ಕಾರ ಈ ನಿಟ್ಟಿನಲ್ಲಿ ಕಠಿಣ ಕ್ರಮಗಳಿಗೆ ಮುಂದಾಗಲಿ. ಸಂತ್ರಸ್ತರಿಗೆ ಬದುಕು ಕಟ್ಟಿಕೊಡುವ ಕಾರ್ಯಕ್ರಮಗಳನ್ನೂ ಆಸ್ಥೆಯಿಂದ ರೂಪಿಸಲಿ.

ಎಂ.ನಾಗರಾಜ ಶೆಟ್ಟಿ,ಬೆಂಗಳೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT