ಪಾವಗಡದ ಬಳಿ ಸಂಭವಿಸಿದ ಖಾಸಗಿ ಬಸ್ ದುರಂತ ವಿಷಾದಕರ. ಇಂತಹ ದುರ್ಘಟನೆಗಳು ಅಲ್ಲಲ್ಲಿ ಸಂಭವಿಸುತ್ತಲೇ ಇರುತ್ತವೆ. ಆದರೂ ಸರ್ಕಾರ ಮಾತ್ರ ತನಗೂ ಇದಕ್ಕೂ ಸಂಬಂಧವೇ ಇಲ್ಲವೆಂಬಂತೆ ವರ್ತಿಸುತ್ತಿದೆ. ಕೆಲ ವರ್ಷಗಳ ಹಿಂದೆ ನಡೆದ ಮಂಡ್ಯದ ಕನಗನಮರಡಿ ಬಸ್ ದುರಂತವನ್ನು ಜನ ಇನ್ನೂ ಮರೆತಿಲ್ಲ. ಸರ್ಕಾರ ಹಾಗೂ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಅಮಾಯಕರು ಬಲಿಯಾಗುತ್ತಿದ್ದಾರೆ. ಹಣದ ಆಸೆಗೆ ಸಾಮರ್ಥ್ಯಕ್ಕಿಂತ ಹೆಚ್ಚು ಪ್ರಯಾಣಿಕರನ್ನು ತುಂಬಿಸಿಕೊಳ್ಳುವುದು, ಗುಜರಿ ಸೇರಬೇಕಾದ ಬಸ್ಗಳನ್ನು ರಸ್ತೆಗಿಳಿಸುವುದರ ಜೊತೆಗೆ ಗ್ರಾಮೀಣ ಪ್ರದೇಶದ ಕೆಲವೆಡೆ ಸರ್ಕಾರಿ ಬಸ್ ವ್ಯವಸ್ಥೆ ಇಲ್ಲದಿರುವಂತಹ ಕಾರಣಗಳು ಅಪಘಾತಗಳಿಗೆ ಎಡೆ ಮಾಡುತ್ತಿವೆ.