ಜಾಗತಿಕ ತಾಪಮಾನ ಹೆಚ್ಚಾಗುತ್ತಿರುವ ಈ ಸಂದರ್ಭದಲ್ಲಿ, ಪ್ರಯಾಣಕ್ಕೆ ಸಮೂಹ ಸಾರಿಗೆಯನ್ನು ಜನರು ಹೆಚ್ಚಾಗಿ ಅವಲಂಬಿಸಬೇಕಾಗಿದೆ. ಸರ್ಕಾರಿ ಬಸ್ಸುಗಳಲ್ಲಿ ಪ್ರಯಾಣಿಸುವವರನ್ನು ಸರ್ಕಾರದ ಯೋಜನೆಯ ಫಲಾನುಭವಿಗಳೆಂದು ಪರಿಗಣಿಸಿ, ಟಿಕೆಟ್ ದರ ಕಡಿಮೆ ಮಾಡಬೇಕು. ಈ ಮೂಲಕ, ಸಮೂಹ ಸಾರಿಗೆ ಬಳಕೆಗೆ ಸರ್ಕಾರ ಪ್ರತ್ಯಕ್ಷವಾಗಿ ಉತ್ತೇಜನ ನೀಡಬೇಕು.