ರಾಜ್ಯದ ಸಂಸದರು ಮತ್ತು ಸಚಿವರ ಉಪಯೋಗಕ್ಕೆ, ₹ 22 ಲಕ್ಷದ ಮಿತಿಯನ್ನು ₹ 23 ಲಕ್ಷಕ್ಕೆ ಏರಿಸಿ ಹೊಸ ಕಾರುಗಳನ್ನು ಖರೀದಿಸಲು ಸರ್ಕಾರ ಅನುಮತಿ ನೀಡಿದೆ. ಕೊರೊನಾ ಪಿಡುಗಿನಿಂದ ರಾಜ್ಯದ ಆರ್ಥಿಕ ಸ್ಥಿತಿ ಸಂಕಷ್ಟ ದಲ್ಲಿದ್ದು, ಸಾರಿಗೆ ನಿಗಮಗಳ ನೌಕರರಿಗೆ ಸಕಾಲದಲ್ಲಿ ವೇತನ ನೀಡಲೂ ಸರ್ಕಾರ ಹೆಣಗಾಡುತ್ತಿದೆ. ಇನ್ನೊಂದೆಡೆ, ದಿನೇ ದಿನೇ ಏರುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಿಂದಾಗಿ ಅಗತ್ಯ ವಸ್ತುಗಳ ಬೆಲೆಯೂ ಏರಿಕೆಯಾಗಿ ಸಾಮಾನ್ಯ ಜನ ಪರಿತಪಿಸುತ್ತಿದ್ದಾರೆ.