ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೀಸಲಾತಿ: ಪರಾಮರ್ಶೆ ನಡೆಯಲಿ

Last Updated 9 ಫೆಬ್ರುವರಿ 2021, 17:51 IST
ಅಕ್ಷರ ಗಾತ್ರ

ಮೀಸಲಾತಿ ಹಾಗೂ ಪ್ರಾತಿನಿಧ್ಯದ ಹೆಸರಿನಲ್ಲಿ ಇಂದು ಬೇಡಿಕೆ ಸಲ್ಲಿಸುತ್ತಿರುವ ಸಮುದಾಯಗಳ ಸಂಖ್ಯೆ ಗಣನೀಯವಾಗಿ ಏರುತ್ತಲೇ ಇದೆ. ಮಹಾರಾಷ್ಟ್ರದಲ್ಲಿ ಮರಾಠಿಗರು, ಗುಜರಾತಿನಲ್ಲಿ ಪಟೇಲರು, ಕರ್ನಾಟಕದಲ್ಲಿ ಲಿಂಗಾಯತ ಪಂಚಮಸಾಲಿ, ಕುರುಬರು ಹಾಗೂ ಒಕ್ಕಲಿಗರು... ಹೀಗೆ ಅನೇಕ ಕಡೆ ಮೀಸಲಾತಿ ಬೇಡಿಕೆಯ ಕೂಗು ಕೇಳಿಬರುತ್ತಿದೆ. ಈ ಮೀಸಲಾತಿ ಎಂಬುದು ರಾಜಕೀಯ ದಾಳವಾಗಿ ಬಳಕೆಯಾಗಿ, ಮುಂದೊಂದು ದಿನ ಇದೇ ಪಿಡುಗಾಗಿ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡಿದರೂ ಆಶ್ಚರ್ಯವಿಲ್ಲ. ಹಾಗೆ ಆಗುವ ಮುನ್ನವೇ ಎಚ್ಚೆತ್ತುಕೊಂಡು, ಮೀಸಲಾತಿಯ ಅಗತ್ಯದ ಬಗ್ಗೆ ಪರಿಶೀಲನೆ, ಪರಾಮರ್ಶೆ ಹಾಗೂ ಪುನರಾವಲೋಕನ ಮಾಡಿಕೊಳ್ಳಲು ಕಾಲ ಪಕ್ವವಾಗಿದೆ.

- ಮಹೇಶ್ ಸಿ.ಎಚ್.,ಶಿವಮೊಗ್ಗ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT