ಮೈಸೂರಿನಲ್ಲಿ ಇತ್ತೀಚೆಗೆ ನಡೆದ ಯುವ ದಸರಾ ಕಾರ್ಯಕ್ರಮದಲ್ಲಿ ಗಾಯಕ ಚಂದನ್ ಶೆಟ್ಟಿ ಅವರು ಬಿಗ್ ಬಾಸ್ ಸ್ಪರ್ಧಿಯಾಗಿದ್ದ ನಿವೇದಿತಾ ಗೌಡ ಅವರಲ್ಲಿ ಸಾರ್ವಜನಿಕರ ಎದುರೇ ಪ್ರೇಮ ನಿವೇದನೆ ಮಾಡಿ, ಸರ್ಕಾರಿ ಪ್ರಾಯೋಜಕತ್ವದ ಕಾರ್ಯಕ್ರಮದ ವೇದಿಕೆಯನ್ನು ದುರ್ಬಳಕೆ ಮಾಡಿಕೊಂಡಿರುವುದು ಎಷ್ಟು ಸರಿ? ಇದರಿಂದ ಮುಜುಗರ ಉಂಟಾಗಿದೆ. ಇದಕ್ಕೆ ಕಾರ್ಯಕ್ರಮದ ಆಯೋಜಕರನ್ನೇ ನೇರ ಹೊಣೆ ಮಾಡಬೇಕು.