‘ಎರಡನೇ ಡೋಸ್ಗೆ ಲಸಿಕೆ ಬರಲು ಆರಂಭವಾಗಿದೆ. ಅದಕ್ಕಾಗಿ ಗಾಬರಿ ಬಿದ್ದು, ರಾತ್ರಿ ವೇಳೆ ಸರದಿಯಲ್ಲಿ ನಿಂತು ಬೊಬ್ಬೆ ಹೊಡೆಯುವ ಅಗತ್ಯವಿಲ್ಲ’ ಎಂದು ಮುಖ್ಯಮಂತ್ರಿ ಹೇಳಿರುವುದು ಹಿರಿಯ ನಾಗರಿಕರಿಗೆ ಆಘಾತವನ್ನುಂಟು ಮಾಡಿದೆ. ಹಿರಿಯ ನಾಗರಿಕರು ಸರ್ಕಾರದ ಆದೇಶವನ್ನು ಪಾಲಿಸಲು ಮತ್ತು ರೋಗ ಹರಡುವುದನ್ನು ತಡೆಗಟ್ಟಲು ಜವಾಬ್ದಾರಿಯುತರಾಗಿ ಸರದಿಯಲ್ಲಿ ನಿಲ್ಲುತ್ತಿದ್ದಾರೆ. ಅಂತಹವರಿಗೆ ‘ಬೊಬ್ಬೆ’ ಎಂಬ ಪದವನ್ನು ಉಪಯೋಗಿಸದೆ, ನಮ್ಮ ಸುಂದರವಾದ ಕನ್ನಡ ಭಾಷೆಯಲ್ಲಿ ‘ಲಸಿಕೆಯು ಸರ್ವರಿಗೂ ಲಭ್ಯವಾಗುತ್ತದೆ’ ಎಂದು ಹೇಳಿಕೆ ಕೊಟ್ಟಿದ್ದರೆ ಸಾಕಿತ್ತು.