<p>ಕೊರೊನಾ ಸೋಂಕಿಗೆ ಒಳಗಾಗಿರುವ ಮುಖ್ಯಮಂತ್ರಿ <a href="https://www.prajavani.net/stories/karnataka-news/karnataka-cm-bs-yediyurappa-tests-positive-for-coronavirus-sunday-covid19-750277.html" target="_blank">ಬಿ.ಎಸ್.ಯಡಿಯೂರಪ್ಪ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ </a>ದಾಖಲಾಗಿದ್ದಾರೆ. ಈ ನಡೆ ಮೂಲಕ ಸರ್ಕಾರಿ ಆಸ್ಪತ್ರೆಗಳ ಬಗ್ಗೆ ಜನರಲ್ಲಿ ವಿಶ್ವಾಸಾರ್ಹತೆ ಮೂಡಿಸುವಂತಹ ಸುವರ್ಣ ಅವಕಾಶವನ್ನು ಅವರು ಕಳೆದುಕೊಂಡಿದ್ದಾರೆ. ಸ್ವತಃ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ, ಸರ್ಕಾರಿ ಸೇವೆಗಳ ಬಗ್ಗೆ ಜನರ ನಂಬಿಕೆಯನ್ನು ಅವರು ಇಮ್ಮಡಿಗೊಳಿಸಬಹುದಿತ್ತು.</p>.<p>ಒಬ್ಬ ಮುಖ್ಯಮಂತ್ರಿಗೆ ತನ್ನ ನೇತೃತ್ವದಲ್ಲಿ ನಡೆಯುವ ಸಂಸ್ಥೆಗಳ ಬಗ್ಗೆಯೇ ನಂಬಿಕೆ ಇಲ್ಲದೇ ಹೋದರೆ ಇನ್ನು ಪ್ರಜೆಗಳು ಅವುಗಳನ್ನು ಹೇಗೆ ನಂಬುತ್ತಾರೆ? ಸರ್ಕಾರಿ ಆಸ್ಪತ್ರೆಗಳು ನಂಬಲು ಅರ್ಹವಲ್ಲ ಎನ್ನುವುದಾದರೆ, ಆಸ್ಪತ್ರೆಗಳನ್ನು ಸಂಪೂರ್ಣವಾಗಿ ಖಾಸಗೀಕರಣಗೊಳಿಸಲಿ. ಬಡ ಬೋರೇಗೌಡನ ಸುಂಕದ ಹಣದಲ್ಲಿ ರಾಜಕಾರಣಿಗಳಿಗೆ ವಿಶೇಷ ಸೌಲಭ್ಯ ಸಲ್ಲದು.</p>.<p><em><strong>-ಶಿವಕುಮಾರ್ ಎಚ್.ಎನ್., ನಂಜನಗೂಡು</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊರೊನಾ ಸೋಂಕಿಗೆ ಒಳಗಾಗಿರುವ ಮುಖ್ಯಮಂತ್ರಿ <a href="https://www.prajavani.net/stories/karnataka-news/karnataka-cm-bs-yediyurappa-tests-positive-for-coronavirus-sunday-covid19-750277.html" target="_blank">ಬಿ.ಎಸ್.ಯಡಿಯೂರಪ್ಪ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ </a>ದಾಖಲಾಗಿದ್ದಾರೆ. ಈ ನಡೆ ಮೂಲಕ ಸರ್ಕಾರಿ ಆಸ್ಪತ್ರೆಗಳ ಬಗ್ಗೆ ಜನರಲ್ಲಿ ವಿಶ್ವಾಸಾರ್ಹತೆ ಮೂಡಿಸುವಂತಹ ಸುವರ್ಣ ಅವಕಾಶವನ್ನು ಅವರು ಕಳೆದುಕೊಂಡಿದ್ದಾರೆ. ಸ್ವತಃ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ, ಸರ್ಕಾರಿ ಸೇವೆಗಳ ಬಗ್ಗೆ ಜನರ ನಂಬಿಕೆಯನ್ನು ಅವರು ಇಮ್ಮಡಿಗೊಳಿಸಬಹುದಿತ್ತು.</p>.<p>ಒಬ್ಬ ಮುಖ್ಯಮಂತ್ರಿಗೆ ತನ್ನ ನೇತೃತ್ವದಲ್ಲಿ ನಡೆಯುವ ಸಂಸ್ಥೆಗಳ ಬಗ್ಗೆಯೇ ನಂಬಿಕೆ ಇಲ್ಲದೇ ಹೋದರೆ ಇನ್ನು ಪ್ರಜೆಗಳು ಅವುಗಳನ್ನು ಹೇಗೆ ನಂಬುತ್ತಾರೆ? ಸರ್ಕಾರಿ ಆಸ್ಪತ್ರೆಗಳು ನಂಬಲು ಅರ್ಹವಲ್ಲ ಎನ್ನುವುದಾದರೆ, ಆಸ್ಪತ್ರೆಗಳನ್ನು ಸಂಪೂರ್ಣವಾಗಿ ಖಾಸಗೀಕರಣಗೊಳಿಸಲಿ. ಬಡ ಬೋರೇಗೌಡನ ಸುಂಕದ ಹಣದಲ್ಲಿ ರಾಜಕಾರಣಿಗಳಿಗೆ ವಿಶೇಷ ಸೌಲಭ್ಯ ಸಲ್ಲದು.</p>.<p><em><strong>-ಶಿವಕುಮಾರ್ ಎಚ್.ಎನ್., ನಂಜನಗೂಡು</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>