ಒಬ್ಬ ಮುಖ್ಯಮಂತ್ರಿಗೆ ತನ್ನ ನೇತೃತ್ವದಲ್ಲಿ ನಡೆಯುವ ಸಂಸ್ಥೆಗಳ ಬಗ್ಗೆಯೇ ನಂಬಿಕೆ ಇಲ್ಲದೇ ಹೋದರೆ ಇನ್ನು ಪ್ರಜೆಗಳು ಅವುಗಳನ್ನು ಹೇಗೆ ನಂಬುತ್ತಾರೆ? ಸರ್ಕಾರಿ ಆಸ್ಪತ್ರೆಗಳು ನಂಬಲು ಅರ್ಹವಲ್ಲ ಎನ್ನುವುದಾದರೆ, ಆಸ್ಪತ್ರೆಗಳನ್ನು ಸಂಪೂರ್ಣವಾಗಿ ಖಾಸಗೀಕರಣಗೊಳಿಸಲಿ. ಬಡ ಬೋರೇಗೌಡನ ಸುಂಕದ ಹಣದಲ್ಲಿ ರಾಜಕಾರಣಿಗಳಿಗೆ ವಿಶೇಷ ಸೌಲಭ್ಯ ಸಲ್ಲದು.