ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾವೇರಿಯಲ್ಲಿ ಸಮ್ಮೇಳನ: ಸ್ವಾಗತಾರ್ಹ ನಿರ್ಧಾರ

Last Updated 9 ಫೆಬ್ರುವರಿ 2020, 19:45 IST
ಅಕ್ಷರ ಗಾತ್ರ

ಅಖಿಲ ಭಾರತ86ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಾವೇರಿಯಲ್ಲಿ ನಡೆಸಲು ತೀರ್ಮಾನಿಸಿರುವುದು ಸ್ವಾಗತಾರ್ಹ. ಅಖಂಡ ಕರ್ನಾಟಕದ ಮಧ್ಯಭಾಗದಲ್ಲಿ ಇರುವ ಹಾವೇರಿ, ರಾಜ್ಯದ ವಿವಿಧ ಭಾಗಗಳಿಂದ ಬರುವ ಸಾಹಿತ್ಯಪ್ರೇಮಿಗಳಿಗೆ ಅನುಕೂಲಕರವಾದ ಸ್ಥಳ. ಮೇಲಾಗಿ ಈ ಜಿಲ್ಲೆಯು ಕವಿ ಸರ್ವಜ್ಞ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ವಿ.ಕೃ.ಗೋಕಾಕ, ಸಂತಶಿಶುನಾಳ ಶರೀಷ, ಗಳಗನಾಥ, ಸ್ವಾತಂತ್ರ್ಯ ಹೋರಾಟಗಾರ ಮೈಲಾರ ಮಹಾದೇವ ಹೀಗೆ ಸಾಲು ಸಾಲು ಪುಣ್ಯವಂತರಿಗೆ ಜನ್ಮ ನೀಡಿದ ನೆಲ. ಇಲ್ಲಿ ಸಮ್ಮೇಳನದ ವಿವಿಧ ಗೋಷ್ಠಿಗಳು ನಡೆಯುವಾಗ, ಈ ನೆಲದ ಗಣ್ಯರನ್ನು ಸ್ಮರಿಸಲು ಮತ್ತೊಂದು ಅವಕಾಶ ದೊರೆಯುತ್ತದೆ ಮತ್ತು ಅಖಂಡ ಕರ್ನಾಟಕದ ಬೇರು ಮತ್ತಷ್ಟು ಆಳಕ್ಕೆ ಇಳಿಯುತ್ತದೆ.

ಗಣಪತಿ ನಾಯ್ಕ,ಕಾನಗೋಡ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT