<p>ಹೃದಯಸಂಬಂಧಿ ತೊಂದರೆಯಿಂದ ಬಳಲುತ್ತಿದ್ದ 40 ದಿನದ ಮಗುವನ್ನು ಇತ್ತೀಚೆಗೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನಿಂದ ಝೀರೊ ಟ್ರಾಫಿಕ್ ವ್ಯವಸ್ಥೆಯಲ್ಲಿ ಆಂಬುಲೆನ್ಸ್ ಮೂಲಕ ಬೆಂಗಳೂರಿಗೆ ಕರೆದೊಯ್ದ ಹನೀಫ್ ಎಂಬ ಚಾಲಕರ ಕರ್ತವ್ಯಪ್ರಜ್ಞೆ ಒಂದೆಡೆಯಾದರೆ, ದೂರದ ಬೆಂಗಳೂರಿನವರೆಗೂ ಆಂಬುಲೆನ್ಸ್ನ ಸುಗಮ ಸಂಚಾರಕ್ಕೆ ದಾರಿ ಮಾಡಿಕೊಟ್ಟ ಪೊಲೀಸರ ವೃತ್ತಿಪರತೆ ಮತ್ತೊಂದೆಡೆ. ಇವರೆಲ್ಲರೂ ಅಭಿನಂದನಾರ್ಹರು.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/stateregional/zero-traffic-ambulance-reached-bangalore-from-mangalore-in-430-hours-703580.html" target="_blank">ನಾಲ್ಕೂವರೆ ಗಂಟೇಲಿ ಮಂಗಳೂರಿಂದ ಬೆಂಗಳೂರಿಗೆ ಬಂತು ಆಂಬುಲೆನ್ಸ್</a></p>.<p>ಸಂಕಷ್ಟದ ಸಂದರ್ಭದಲ್ಲಿ ತಮ್ಮ ಜೀವದ ಹಂಗು ತೊರೆದು ಪರರ ಜೀವವನ್ನು ಉಳಿಸುವ ಹನೀಫ್ ಅವರಂತಹ ಆಂಬುಲೆನ್ಸ್ ಚಾಲಕರು ಮತ್ತು ಈಜುಗಾರರು ಇದ್ದಾರಾದರೂ ಅವರು ಬಹುತೇಕ ತೆರೆಮರೆಯಲ್ಲಿಯೇ ಇರುತ್ತಾರೆ. ಅಂತಹವರ ಕಾರ್ಯವನ್ನು ಗುರುತಿಸಿ ಗೌರವಿಸಬೇಕಾಗಿದೆ. ಇಂತಹ ಜೀವರಕ್ಷಕರಿಗೆ ಸರ್ಕಾರವು ಸೇವಾ ಭದ್ರತೆಯನ್ನು ಒದಗಿಸಬೇಕಾಗಿದೆ.</p>.<p><strong>ಆದರ್ಶ್ ಶೆಟ್ಟಿ ಕಜೆಕ್ಕಾರ್,ಉಪ್ಪಿನಂಗಡಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೃದಯಸಂಬಂಧಿ ತೊಂದರೆಯಿಂದ ಬಳಲುತ್ತಿದ್ದ 40 ದಿನದ ಮಗುವನ್ನು ಇತ್ತೀಚೆಗೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನಿಂದ ಝೀರೊ ಟ್ರಾಫಿಕ್ ವ್ಯವಸ್ಥೆಯಲ್ಲಿ ಆಂಬುಲೆನ್ಸ್ ಮೂಲಕ ಬೆಂಗಳೂರಿಗೆ ಕರೆದೊಯ್ದ ಹನೀಫ್ ಎಂಬ ಚಾಲಕರ ಕರ್ತವ್ಯಪ್ರಜ್ಞೆ ಒಂದೆಡೆಯಾದರೆ, ದೂರದ ಬೆಂಗಳೂರಿನವರೆಗೂ ಆಂಬುಲೆನ್ಸ್ನ ಸುಗಮ ಸಂಚಾರಕ್ಕೆ ದಾರಿ ಮಾಡಿಕೊಟ್ಟ ಪೊಲೀಸರ ವೃತ್ತಿಪರತೆ ಮತ್ತೊಂದೆಡೆ. ಇವರೆಲ್ಲರೂ ಅಭಿನಂದನಾರ್ಹರು.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/stateregional/zero-traffic-ambulance-reached-bangalore-from-mangalore-in-430-hours-703580.html" target="_blank">ನಾಲ್ಕೂವರೆ ಗಂಟೇಲಿ ಮಂಗಳೂರಿಂದ ಬೆಂಗಳೂರಿಗೆ ಬಂತು ಆಂಬುಲೆನ್ಸ್</a></p>.<p>ಸಂಕಷ್ಟದ ಸಂದರ್ಭದಲ್ಲಿ ತಮ್ಮ ಜೀವದ ಹಂಗು ತೊರೆದು ಪರರ ಜೀವವನ್ನು ಉಳಿಸುವ ಹನೀಫ್ ಅವರಂತಹ ಆಂಬುಲೆನ್ಸ್ ಚಾಲಕರು ಮತ್ತು ಈಜುಗಾರರು ಇದ್ದಾರಾದರೂ ಅವರು ಬಹುತೇಕ ತೆರೆಮರೆಯಲ್ಲಿಯೇ ಇರುತ್ತಾರೆ. ಅಂತಹವರ ಕಾರ್ಯವನ್ನು ಗುರುತಿಸಿ ಗೌರವಿಸಬೇಕಾಗಿದೆ. ಇಂತಹ ಜೀವರಕ್ಷಕರಿಗೆ ಸರ್ಕಾರವು ಸೇವಾ ಭದ್ರತೆಯನ್ನು ಒದಗಿಸಬೇಕಾಗಿದೆ.</p>.<p><strong>ಆದರ್ಶ್ ಶೆಟ್ಟಿ ಕಜೆಕ್ಕಾರ್,ಉಪ್ಪಿನಂಗಡಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>