ಕೆಲವು ಮಠ ಮಂದಿರಗಳಲ್ಲಿ ಭಕ್ತಾದಿಗಳಿಗೆ ನಿತ್ಯ ದಾಸೋಹ ನಡೆಯುತ್ತಿತ್ತು. ಆದರೆ ಈಗ ಲಾಕ್ಡೌನ್ನಿಂದಾಗಿ ಎಲ್ಲರೂ ಮನೆಯೊಳಗೆ ಉಳಿದಿರುವುದರಿಂದ, ಇಲ್ಲಿಗೆ ಭೇಟಿ ನೀಡುವವರು ಇಲ್ಲವಾಗಿದೆ. ಆದರೆ ದೇಶದ ಪ್ರಜೆಗಳ ರಕ್ಷಣೆಗಾಗಿ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರು, ವೈದ್ಯರು, ದಾದಿಯರು, ಪೊಲೀಸರು, ಪಂಚಾಯಿತಿ ಅಧಿಕಾರಿಗಳು, ಮಾಧ್ಯಮದವರು ಹಸಿವನ್ನು ಸಹಿಸಿಕೊಂಡು, ತಮ್ಮ ಜೀವ ಪಣಕ್ಕಿಟ್ಟು ಕೆಲಸ ಮಾಡುತ್ತಿದ್ದಾರೆ.