ಧಾರವಾಡದಲ್ಲಿ ವಾಣಿಜ್ಯ ಸಂಕೀರ್ಣದ ಕಟ್ಟಡ ನೆಲಸಮವಾಗಿ ಇತ್ತೀಚೆಗೆ ಒಂದು ವರ್ಷ ಪೂರ್ತಿಗೊಂಡಿದೆ. ಕೊರೊನಾ ವೈರಸ್ನ ಭೀತಿಯಲ್ಲಿರುವ ಜನ, ಈ ದುರ್ಘಟನೆಯಲ್ಲಿ ಮಡಿದವರನ್ನು ಮರೆತಿದ್ದಾರೆ. ಅಂದಿನ ಘಟನೆಯಲ್ಲಿ ಹತ್ತಾರು ಜನ ಪ್ರಾಣ ಕಳೆದುಕೊಂಡು, ಬಹಳಷ್ಟು ಮಂದಿ ಅಂಗವಿಕಲರಾಗಿದ್ದಾರೆ. ಸತ್ತವರ ಕುಟುಂಬಕ್ಕೆ, ಗಾಯಾಳುಗಳಿಗೆ ಸರ್ಕಾರ ಹಾಗೂ ಸ್ಥಳೀಯ ಆಡಳಿತ ಒಂದಿಷ್ಟು ಪರಿಹಾರ ಕೊಟ್ಟು ಕೈತೊಳೆದುಕೊಂಡಿವೆ.