ಕಳೆದ ವರ್ಷದ ಅತಿವೃಷ್ಟಿಯ ಸಂತ್ರಸ್ತರಿಗೆ ಸರ್ಕಾರ ಯಾವ ರೀತಿ ಸ್ಪಂದಿಸಿದೆ ಎಂಬುದನ್ನು ಮೂಡಿಗೆರೆ ತಾಲ್ಲೂಕಿನ ಕಳಸ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾವಿನಕೆರೆ ಗ್ರಾಮದ ಗಿರಿಜನ ಕುಟುಂಬದ ಕತೆಯು ಅನಾವರಣಗೊಳಿಸಿದೆ. ಮಳೆಯಿಂದ ಮನೆ ಕಳೆದುಕೊಂಡ ಈ ಕುಟುಂಬವು ಸಮೀಪದ ಕಲ್ಲಿನ ಗುಹೆಯಲ್ಲಿ ಆಶ್ರಯ ಪಡೆದಿದ್ದುದು, ವಿದ್ಯಾರ್ಥಿ ದೆಸೆಯಲ್ಲಿ ಓದಿದ ಶಿಲಾಯುಗದ ನಾಗರಿಕತೆಯನ್ನು ನೆನಪಿಸಿತು.